ಮಂಗಳೂರು, ಜೂನ್.05 : ಕೋವಿಡ್ ನಿರ್ವಹಣೆಗೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸೌಹಾರ್ದ ಸಹಕಾರಿ ಸಂಘಗಳು ದೇಣಿಗೆಯನ್ನು ನೀಡಿದ್ದು, ಈ ದೇಣಿಗೆಯ ಒಟ್ಟು ಮೊತ್ತವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಶುಕ್ರವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.
ಕೋವಿಡ್ ನಿರ್ವಹಣೆಗೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ಪ್ರಣಾವ ಸೌಹಾರ್ದ ಸಹಕಾರಿ ಲಿ, ರೂ.10,000, ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿ, ರೂ.10,000, ಪದವು ವ್ಯವಸಾಯ ಸಂಘ ಲಿ, ರೂ. 50,000, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ(ನಿ) ರೂ. 25,000 ರೂ. ದೇಣಿಗೆ ನೀಡಿದೆ.
ಈ ಒಟ್ಟು ಮೊತ್ತ 95000/ ರೂಪಾಯಿಯ ಚೆಕ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಶುಕ್ರವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.
Comments are closed.