ಕರಾವಳಿ

ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಯೋಗ ದಿನಾಚರಣೆ

Pinterest LinkedIn Tumblr

ಮಂಗಳೂರು : ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ ಭಾರತ ಮಾತೆಗೆ ಪುಷ್ಪಾರ್ಚಣೆ ಮಾಡಿ ಉದ್ಘಾಟಿಸಿದರು .ಯೋಗ ಶಿಕ್ಷಕ ರಾಜೇಶ್ ಕಾರ್ಯಕ್ರಮ ನಡೆಸಿದರು.

ಪ್ರಮುಖರಾದ ಕಸ್ತೂರಿ ಪಂಜ, ಸುಧೀರ್ ಶೆಟ್ಟಿ, ಗಣೇಶ್ ಹೊಸಬೆಟ್ಟು, ಪೂಜಾ ಪೈ, ಜಯಶ್ರೀ ಕರ್ಕೇರ, ಸುಕೇಶ್ ಶೆಟ್ಟಿ, ಜಿತೇಂದ್ರ ಕೊಟ್ಟಾರಿ, ನಿತಿನ್ ಕುಮಾರ್, ಪುರುಷೋತ್ತಮ್ ಭಟ್, ಗುರುಚರಣ್ ಉಪಸ್ಥಿತಿ ಇದ್ದರು.ಸಂಘದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು

Comments are closed.