ಕರಾವಳಿ

ದ.ಕ. ಜಿಲ್ಲೆಯಲ್ಲಿ ಇಂದು ಕೊರೋನಾಕ್ಕೆ ಮತ್ತೊಂದು ಬಲಿ : ಸಾವಿನ ಸಂಖ್ಯೆ 10ಕ್ಕೇ ಏರಿಕೆ

Pinterest LinkedIn Tumblr

ಮಂಗಳೂರು, ಜೂನ್. 24 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಬ್ಬರು ಕೊರೋನಾಕ್ಕೆ ಬಲಿಯಾಗಿದ್ದಾರೆ, ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಉಳ್ಳಾಲದ ಮಹಿಳೆಗೆ ಕೊರೋನ ಪಾಸಿಟಿವ್ ಆಗಿದ್ದು, ಅವರು ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ಈ ಮೂಲಕ ದ.ಕ.ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಾವಿನ ಸಂಖ್ಯೆ 10ಕ್ಕೇ ಏರಿದೆ.

ಉಳ್ಳಾಲದ 57 ವರ್ಷದ ಮಹಿಳೆಯನ್ನು ಅನಾರೋಗ್ಯದ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, 8 ದಿನಗಳ ಕಾಲ ಚಿಕಿತ್ಸೆ ಪಡೆದಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ಕೊರೋನ ಪಾಸಿಟಿವ್ ಬಂದಿತ್ತು. ಅವರು ಬುಧವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

Comments are closed.