ಕರಾವಳಿ

ದ.ಕ. ಜಿಲ್ಲೆಯಲ್ಲಿ ಇಂದು 12 ಪಾಸಿಟಿವ್ – 1 ಸಾವು : ರಾಜ್ಯದಲ್ಲಿ 397 ಮಂದಿಯಲ್ಲಿ ಕೊರೊನಾ ಪತ್ತೆ

Pinterest LinkedIn Tumblr

 

ಮಂಗಳೂರು, ಜೂನ್. 24 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಬ್ಬರು ಕೊರೋನಾಕ್ಕೆ ಬಲಿಯಾಗಿದ್ದಾರೆ, ಜೊತೆಗೆ ಜಿಲ್ಲೆಯಲ್ಲಿ ಇಂದು ಮತ್ತೆ 12 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕರ್ನಾಟಕದಲ್ಲಿ ಇಂದು ಮತ್ತೆ ಒಂದೇ ದಿನ ಬರೋಬ್ಬರಿ 397 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ರಾಜ್ಯದಲ್ಲಿ ಸೋಮವಾರ ಒಂದೇ ದಿನ 397 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿ 12 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಾಗಿ ವರದಿಯಾಗಿದೆ. ಈ ಮೂಲಕ ದ.ಕ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 465ಕ್ಕೆ ಏರಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 173, ಬಳ್ಳಾರಿ 34, ರಾಮನಗರ 22, ಕಲಬುರಗಿ 22, ಉಡುಪಿ 14, ಯಾದಗಿರಿ 13, ದಕ್ಷಿಣ ಕನ್ನಡ 12, ಧಾರವಾಡ 12, ಕೊಪ್ಪಳ 11, ಉತ್ತರ ಕನ್ನಡ 9, ರಾಯಚೂರು 9, ಚಿಕ್ಕಬಳ್ಳಾಪುರ 8, ದಾವಣಗೆರೆ 8, ಮೈಸೂರು 7, ಬೆಂಗಳೂರು ಗ್ರಾಮಾಂತರ 7, ಗದಗ 6, ಕೋಲಾರ 6, ಬೀದರ್ 5, ವಿಜಯಪುರ 4, ಶಿವಮೊಗ್ಗ 3, ಮಂಡ್ಯ, ಚಿತ್ರದುರ್ಗ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಯಲ್ಲಿ ತಲಾ 2, ಬೆಳಗಾವಿ, ಹಾಸನ, ಚಿಕ್ಕಮಗಳೂರು ಮತ್ತು ತುಮಕೂರು ಜಿಲ್ಲೆಯಲ್ಲಿ ತಲಾ 1 ಪ್ರಕರಣ ಪಾಸಿಟಿವ್ ಬಂದಿದೆ. ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 10,118 ಕ್ಕೆ ಏರಿಕೆಯಾಗಿದೆ.

ದ.ಕ.ಜಿಲ್ಲೆಯಲ್ಲಿ ಕೊರೊನಾಗೆ 1 ಬಲಿ : ಸಾವಿನ ಸಂಖ್ಯೆ 10ಕ್ಕೇ ಏರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಬ್ಬರು ಕೊರೋನಾಕ್ಕೆ ಬಲಿಯಾಗಿದ್ದಾರೆ, ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಉಳ್ಳಾಲದ ಮಹಿಳೆಗೆ ಕೊರೋನ ಪಾಸಿಟಿವ್ ಆಗಿದ್ದು, ಅವರು ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ಈ ಮೂಲಕ ದ.ಕ.ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಾವಿನ ಸಂಖ್ಯೆ 10ಕ್ಕೇ ಏರಿದೆ.

ಉಳ್ಳಾಲದ 57 ವರ್ಷದ ಮಹಿಳೆಯನ್ನು ಅನಾರೋಗ್ಯದ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, 8 ದಿನಗಳ ಕಾಲ ಚಿಕಿತ್ಸೆ ಪಡೆದಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ಕೊರೋನ ಪಾಸಿಟಿವ್ ಬಂದಿತ್ತು. ಅವರು ಬುಧವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ಇಂದು14 ಮಂದಿ ಕೊರೋನಾಕ್ಕೆ ಬಲಿ:

ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ವ್ಯಾಪಕ ಹೆಚ್ಚಳವಾಗುತ್ತಿದೆ. ಸೋಂಕಿತರು ಸಾವನ್ನಪ್ಪುತ್ತಿರುವ ಪ್ರಕರಣದಲ್ಲೂ ಏರಿಕೆಯಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಐದು, ಬಳ್ಳಾರಿಯಲ್ಲಿ ನಾಲ್ಕು, ರಾಮನಗರ ಎರಡು, ಕಲಬುರಗಿಯಲ್ಲಿ 2 ಹಾಗೂ ತುಮಕೂರು ಜಿಲ್ಲೆಯಲ್ಲಿ ಒಂದು ಸಾವು ಸಂಭವಿಸಿದ್ದು, ಒಟ್ಟು ಸಾವಿನ ಸಂಖ್ಯೆ 164ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಒಟ್ಟಾರೆ ರಾಜ್ಯದಲ್ಲಿ 10,118 ಕೊರೋನ ಸೋಂಕಿತರ ಪೈಕಿ 6,151 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 149 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 164 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 3,799 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments are closed.