ಕರಾವಳಿ

ದ.ಕ.ಜಿಲ್ಲೆಯಲ್ಲಿ ಕೊರೋನಾಘಾತ -ಇಂದು ಮತ್ತೆ 33 ಮಂದಿಯಲ್ಲಿ ಕೊರೊನಾ ಪತ್ತೆ : ರಾಜ್ಯದಲ್ಲಿ 442 ಮಂದಿಗೆ ಪಾಸಿಟಿವ್

Pinterest LinkedIn Tumblr

ಮಂಗಳೂರು, ಜೂನ್. 26 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾಘಾತವಾಗಿದ್ದು, ಇಂದು ಮತ್ತೆ 33 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕರ್ನಾಟಕದಲ್ಲಿ ಇಂದು ಮತ್ತೆ ಒಂದೇ ದಿನ ಬರೋಬ್ಬರಿ 445 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ರಾಜ್ಯದಲ್ಲಿ ಸೋಮವಾರ ಒಂದೇ ದಿನ 445 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿಬರೋಬ್ಬರಿ 33 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಾಗಿ ವರದಿಯಾಗಿದೆ. ಈ ಮೂಲಕ ದ.ಕ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 465ಕ್ಕೆ ಏರಿದೆ.ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 11,005ಕ್ಕೆ ಏರಿಕೆಯಾಗಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 144, ಬಳ್ಳಾರಿ 47, ಕಲಬುರಗಿ 42, ಕೊಪ್ಪಳ 36, ದಕ್ಷಿಣ ಕನ್ನಡ 33, ಧಾರವಾಡ 30, ರಾಯಚೂರು 14, ಗದಗ 12, ಚಾಮರಾಜನಗರ 11, ಉಡುಪಿ 9, ಯಾದಗಿರಿ 7, ಮಂಡ್ಯ 6, ಉತ್ತರ ಕನ್ನಡ 6, ಬಾಗಲಕೋಟೆ 6, ಕೋಲಾರ 6, ಶಿವಮೊಗ್ಗ 6, ಮೈಸೂರು 5, ಚಿಕ್ಕಮಗಳೂರು 4, ಕೊಡಗು 4, ಹಾಸನ 3, ಬೆಂಗಳೂರು ಗ್ರಾಮಾಂತರ 3, ವಿಜಯಪುರ 2, ತುಮಕೂರು 2, ಹಾವೇರಿ 2, ಬೀದರ್, ಬೆಳಗಾವಿ, ರಾಮನಗರ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ತಲಾ 1 ಪ್ರಕರಣ ಪಾಸಿಟಿವ್ ಬಂದಿದೆ.

ರಾಜ್ಯದಲ್ಲಿ 10 ಮಂದಿ ಕೊರೋನಾಕ್ಕೆ ಬಲಿ:

ಬೆಂಗಳೂರು ನಗರ ಜಿಲ್ಲೆಯಲ್ಲಿ ಮೂರು, ಕೋಲಾರ, ಧಾರವಾಡ, ಶಿವಮೊಗ್ಗ, ಕಲಬುರಗಿ, ಬಾಗಲಕೋಟೆ, ಬೀದರ್ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ತಲಾ ಒಂದು ಸಾವು ಸಂಭವಿಸಿದ್ದು, ಒಟ್ಟು ಸಾವಿನ ಸಂಖ್ಯೆ 180ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಒಟ್ಟಾರೆ ರಾಜ್ಯದಲ್ಲಿ 11,005 ಕೊರೋನ ಸೋಂಕಿತರ ಪೈಕಿ 6,916 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 246 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 180 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 3,905 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದ.ಕ. ಜಿಲ್ಲೆಯಲ್ಲಿ ನಾಲ್ಕು ಐಎಲ್ ಐ ಹಾಗೂ 2 ಎಸ್ ಎ ಎ ಆರ್ ಐ ಪ್ರಕರಣ ಪತ್ತೆ:

ದ.ಕ. ಜಿಲ್ಲೆಯಲ್ಲಿ ಇಂದು ಪಾಸಿಟಿವ್ ಬಂದವರಲ್ಲಿ ಐವರು ಸೌದಿಯಿಂದ ಮರಳಿದವರಾಗಿದ್ದಾರೆ. 6 ಮಂದಿ ಕತಾರ್ ಹಾಗೂ ನಾಲ್ವರು ದಮಾಮ್ ನಿಂದ ಮರಳಿದವರಲ್ಲಿ ಸೋಂಕು ದೃಢಪಟ್ಟಿದೆ. ಇಂದು ಪತ್ತೆಯಾದ ಪ್ರಕರಣಗಳ ಪೈಕಿ ನಾಲ್ಕು ಐಎಲ್ ಐ ಪ್ರಕರಣಗಳಾಗಿದ್ದು, 2 ಎಸ್ ಎ ಎ ಆರ್ ಐ ಪ್ರಕರಣವೆಂದು ಗುರುತಿಸಲಾಗಿದೆ.

ಇದೇ ವೇಳೆ ಉಡುಪಿ ಪ್ರಯಾಣ ಹಿಸ್ಟರಿ ಹೊಂದಿರುವ ಒಬ್ಬರಲ್ಲಿ ಪಾಸಿಟಿವ್ ಕಂಡುಬಂದಿದೆ. ಈ ನಡುವೆ ಟ್ರಾವೆಲ್ ಹಿಸ್ಟರಿ ಇಲ್ಲದ ಒಂದು ಪ್ರಕರಣ ಪತ್ತೆಯಾಗಿದೆ. ಇದು ಜಿಲ್ಲಾಡಳಿತಕ್ಕೆ ಹೊಸ ತಲೆನೋವಿಗೆ ಕಾರಣವಾಗಿದ್ದು, ಈ ಬಗ್ಗೆ ಜಿಲ್ಲಾಡಳಿತ ಆರೋಗ್ಯ ಇಲಾಖೆ ಮಾಹಿತಿ ಕಲೆ ಹಾಕುವ ಕಾರ್ಯದಲ್ಲಿ ತೊಡಗಿದೆ.

Comments are closed.