ಮಂಗಳೂರು : ಬಿಜೈ ಕೆ.ಎಸ್.ಆರ್.ಟಿ.ಸಿ – ಲಾಲ್ ಭಾಗ್ ನಡುವಿನ ರಸ್ತೆ ಅಗಲೀಕರಣಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರ ಭರವಸೆಯ ಮೇರೆಗೆ ಅಂಗಡಿ ಮಾಲಕರು ತಮ್ಮ ಜಾಗ ಬಿಟ್ಟುಕೊಡಲು ಒಪ್ಪಿಗೆ ನೀಡಿದ್ದಾರೆ.
ಸುಮಾರು 15 ವರ್ಷಗಳಿಂದ ಕಗ್ಗಂಟಾಗಿದ್ದ ಈ ಪ್ರಕ್ರಿಯೆಗೆ ಶಾಸಕ ವೇದವ್ಯಾಸ್ ಕಾಮತ್ ಮರು ಜೀವ ತುಂಬಿದ್ದಾರೆ.
ಅಲ್ಲಿನ ಸಾರ್ವಜನಿಕರ ಜೊತೆ ಸಭೆ ನಡೆಸಿ ಯಾವುದೇ ಸಮಸ್ಯೆಯಾಗದ ರೀತಿ ಕಾಮಗಾರಿ ನಡೆಸುತ್ತೇವೆ ಎಂದ ಬಳಿಕ ಸಮ್ಮತಿಸಿದ್ದಾರೆ. ಶೀಘ್ರವೇ ಕಾಮಗಾರಿ ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಈ ಸಂಧರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರು, ಸ್ಮಾರ್ಟ್ ಸಿಟಿ ಅಧಿಕಾರಿಗಳು, ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.
Comments are closed.