ಮಂಗಳೂರು, ಜೂನ್.28 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕಿಗೆ ಇಂದು ಮಧ್ಯಾಹ್ನ ಮತ್ತೊಂದು ಮಹಿಳೆ ಬಲಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ ಮಾಹಾಮಾರಿಗೆ ಮೂವರು ಬಲಿಯಾದಂತಾಗಿದೆ.
ಕೊರೋನ ವೈರಸ್ ಸೋಂಕಿಗೆ ಜೋಕಟ್ಟೆಯ 52ರ ಹರೆಯದ ಮಹಿಳೆಯೊಬ್ಬರು ರವಿವಾರ ಮಧ್ಯಾಹ್ನ ಬಲಿಯಾಗಿದ್ದು, ಕ್ಷಯರೋಗದಿಂದ ಬಳಲುತ್ತಿದ್ದ ಅವರು ಎರಡು ದಿನದ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಬಂಟ್ವಾಳ ತಾಲೂಕಿನ ಬಿ.ಕಸ್ಬಾ ಗ್ರಾಮದ ಲೊರೆಟೊಪದವಿನ 57 ವರ್ಷದ ವೃದ್ದೆ ಹಾಗೂ ಸುರತ್ಕಲ್ನ ಇಡ್ಯಾ ನಿವಾಸಿ 31 ವರ್ಷದ ಯುವಕ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಇದೀಗ ಇಂದು ಮಧ್ಯಾಹ್ನ ಜೋಕಟ್ಟೆಯ ಮಹಿಳೆ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಕೊರೋನ ವೈರಸ್ ಗೆ ಬಲಿಯಾದವರ ಸಂಖ್ಯೆ 13ಕ್ಕೇರಿದೆ.
Comments are closed.