ಕರಾವಳಿ

ಕರಾವಳಿಯ ಬಿಜೆಪಿ ಶಾಸಕರೊಬ್ಬರಿಗೆ ಪಾಸಿಟೀವ್ : ಕ್ಷೇತ್ರದ ಜನರಲ್ಲಿ ಆತಂಕ

Pinterest LinkedIn Tumblr

ಮಂಗಳೂರು, ಜುಲೈ 02 : ದ.ಕ.ಜಿಲ್ಲೆಯಲ್ಲಿ ಕೋರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಹಲವಾರು ವೈದ್ಯರು, ಪೊಲೀಸರೂ ಸೋಂಕಿಗೆ ತುತ್ತಾದ ಬೆನ್ನಲೇ ಇದೀಗ ಕರಾವಳಿಯ ಬಿಜೆಪಿ ಶಾಸಕರೊಬ್ಬರಿಗೆ ಕೊರೊನಾ ಪಾಸಿಟಿವ್‌‌‌‌‌‌‌ ದೃಢಪಟ್ಟಿದೆ.

ಉತ್ತರ ವಿಧಾನ ಸಭಾ (ಸುರತ್ಕಲ್) ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ಅವರು ತಮ್ಮ ಕ್ಷೇತ್ರದಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಸಂದರ್ಭ ಸೋಂಕಿತರ ಸಂಪರ್ಕದಿಂದ ಸೋಂಕು ತಗುಲಿದೆ ಎನ್ನಲಾಗಿದೆ. ಇದರಿಂದ ಶಾಸಕರ ಕ್ಷೇತ್ರದ ಜನರಲ್ಲಿ ಆತಂಕ ಮನೆ ಮಾಡಿದೆ. ಶಾಸಕರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಶಾಸಕರು ಅನ್ಯಕಾಯಿಲೆಯ ತಪಾಷಣೆ ಸಂದರ್ಭ ಸ್ವಯಂ ಪ್ರೇರಿತವಾಗಿ ಕೊರೊನಾ ತಪಾಸಣೆಯನ್ನು ನಡೆಸಿದ್ದು, ಈ ಸಂದರ್ಭ ಸೋಂಕು ಪತ್ತೆಯಾಗಿದೆ. ಇದೀಗ ಶಾಸಕರ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Comments are closed.