ಕರಾವಳಿ

ಬಾರ್ಕೂರು ಸೀತಾ ನದಿಯಲ್ಲಿ ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ದಾರುಣ ಸಾವು

Pinterest LinkedIn Tumblr

ಉಡುಪಿ: ಸೀತಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನಪ್ಪಿದ ದಾರುಣ ಘಟನೆ ಬಾರ್ಕೂರಿನಲ್ಲಿ ಶುಕ್ರವಾರ ಸಂಭವಿಸಿದೆ. ಕಚ್ಚೂರು ಗ್ರಾಮದ ಹಾಲಿಕೋಡಿಯ ಸೀತಾ ನದಿ ಕವಲು ಎಂಬಲ್ಲಿ ಈ ಘಟನೆ ನಡೆದಿದೆ.

ಮೃತ ಯುವಕರನ್ನು ಬಾರ್ಕೂರು ಹೊಸಾಳ ಗ್ರಾಮದ ಚೌಳಿಕೆರೆ ನಿವಾಸಿಗಳಾದ ಹರ್ಷ (25) ಮತ್ತು ಕಾರ್ತಿಕ್ (21) ಎಂದು ಗುರುತಿಸಲಾಗಿದೆ.

ಯುವಕರು ನಿನ್ನೆ ರಾತ್ರಿ ನದಿಯಲ್ಲಿ ಬಲೆ ಬೀಸಿ ಹೋಗಿದ್ದು ಶುಕ್ರವಾರ ಮುಂಜಾನೆ ಬಲೆ ಎತ್ತಲು ತೆರಳಿದ್ದು ನೀರಿನಲ್ಲಿ ಇಳಿದು ಬಲೆಯನ್ನು ಎಳೆಯುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ. ಯುವಕರ ಮೃತದೇಹ ನದಿಯ ನೀರು ಪಾಲಾಗಿದ್ದು ಅಗ್ನಿಶಾಮಕ ದಳ, ಸ್ಥಳೀಯರು ಮತ್ತು ಪೊಲೀಸರು ಮೇಲಕ್ಕೆತ್ತಿದ್ದಾರೆ.

ಮೃತ ಹರ್ಷ ಖಾಸಗಿ ಫೆನ್ಸಾನ್ಸ್ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಕಾರ್ತಿಕ್ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ.

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.