ಕರಾವಳಿ

ದ.ಕ.ಜಿಲ್ಲೆಯಲ್ಲಿ ಶನಿವಾರ 75 ಪಾಸಿಟಿವ್ ಪತ್ತೆ : ರಾಜ್ಯದಲ್ಲಿ 1839 ಮಂದಿಯಲ್ಲಿಸೋಂಕು ಧೃಢ – 24 ಮಂದಿ ಬಲಿ

Pinterest LinkedIn Tumblr

ಮಂಗಳೂರು, ಜುಲೈ.04 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೊಮ್ಮೆ ದಾಖಲೆಯ ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಇಂದು ಮತ್ತೆ 75 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕರ್ನಾಟಕದಲ್ಲಿ ಪ್ರತಿದಿನದ ಕೊರೋನ ಪಾಸಿಟಿವ್ ಪ್ರಕರಣಗಳ ಪೈಕಿ ಇಂದು ಮತ್ತೊಮ್ಮೆ ಅತೀ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಇಂದು ಮತ್ತೆ ಒಂದೇ ದಿನ ಬರೋಬ್ಬರಿ 1839 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಇಂದು ಸೋಂಕಿತರ ಒಟ್ಟು ಸಂಖ್ಯೆ21,549ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ರಾಜ್ಯದಲ್ಲಿ ಬುಧವಾರ ಒಂದೇ ದಿನ 1839 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿಬರೋಬ್ಬರಿ 75 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಾಗಿ ವರದಿಯಾಗಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 1172, ದಕ್ಷಿಣ ಕನ್ನಡ 75, ಬಳ್ಳಾರಿ 73, ಬೀದರ್ 51, ಧಾರವಾಡ 45, ರಾಯಚೂರು 41, ಮೈಸೂರು 38, ಕಲಬುರಗಿ 37, ವಿಜಯಪುರ 37, ಮಂಡ್ಯ 35, ಉತ್ತರ ಕನ್ನಡ 35, ಶಿವಮೊಗ್ಗ 31, ಹಾವೇರಿ 28, ಬೆಳಗಾವಿ 27, ಹಾಸನ 25, ಉಡುಪಿ 18, ಚಿಕ್ಕಬಳ್ಳಾಪುರ 12, ತುಮಕೂರು 12, ಬೆಂಗಳೂರು ಗ್ರಾಮಾಂತರ 11, ಕೋಲಾರ 11, ದಾವಣಗೆರೆ 7, ಚಾಮರಾಜನಗರ 5, ಗದಗ 4, ಕೊಪ್ಪಳ 3, ಚಿಕ್ಕಮಗಳೂರು 3, ರಾಮನಗರ 2, ಯಾದಗಿರಿಯಲ್ಲಿ 1 ಪ್ರಕರಣ ಪಾಸಿಟಿವ್ ಬಂದಿದೆ.

ದ.ಕ. ಜಿಲ್ಲೆಯಲ್ಲಿ ಕೊರೋನಾ ಮಹಾಸ್ಫೋಟ : ಸೋಂಕಿಗೆ ಮೂವರು ಬಲಿ

ದ.ಕ. ಜಿಲ್ಲೆಯಲ್ಲಿ ಇಂದು ಮತ್ತೆ 75 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1085ಕ್ಕೆ ಏರಿಕೆಯಾಗಿದೆ. ಈ ಪೈಕಿ 11 ಮಂದಿ ಅಬುಧಾಬಿ, ಮಸ್ಕತ್‌, ದುಬೈನಿಂದ ಆಗಮಿಸಿದವರಾಗಿದ್ದು 29 ಮಂದಿ ಐಎಲ್‌ಐ ಹಾಗೂ 6 ಎಸ್‌ಎಆಐ ಪ್ರಕರಣವಾಗಿದೆ. 24 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಬಂದಿದ್ದರೆ ಒಬ್ಬರಿಗೆ ದ್ವಿತೀಯ ಸಂಪರ್ಕದಿಂದ ಕೊರೊನಾ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ ಈವರೆಗೆ 1095 ಮಂದಿಗೆ ಸೋಂಕು ತಗುಲಿದ್ದು ಈ ಪೈಕಿ 10 ಜನ ಸೋಂಕಿತರು ಹೊರ ಜಿಲ್ಲೆಯವರಾಗಿದ್ದಾರೆ.ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೂವರು ಬಲಿಯಾಗಿದ್ದು ಮೃತರ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ. ಇನ್ನು ಜಿಲ್ಲೆಯಲ್ಲಿ ಇಂದು 13 ಮಂದಿ ಗುಣಮುಖರಾಗಿದ್ದು ಈವರೆಗೆ ಒಟ್ಟು 516 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೊರೋನಾ ಮಹಾಸ್ಫೋಟ : ಕೊರೋನಾ ಸೋಂಕಿಗೆ 24 ಮಂದಿ ಬಲಿ

ಕರ್ನಾಟಕದಲ್ಲಿ ಕೊರೋನ ವೈರಸ್ ತೀವ್ರಗತಿಯಲ್ಲಿ ಏರುತ್ತಿದ್ದು, ಜನರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಕಳೆದ 24 ಗಂಟೆಗಳಲ್ಲಿ 42 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದುವರೆಗೆ ಅತೀ ಹೆಚ್ಚಿನ ಕೊರೋನ ಸಾವು ಪ್ರಕರಣ ದಾಖಲಾದ ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು 24 ಮಂದಿ ಸಾವನ್ನಪ್ಪಿದ್ದಾರೆ. ಉಳಿದಂತೆ ಬೀದರ್ 6, ದಕ್ಷಿಣ ಕನ್ನಡ 4, ಕಲಬುರಗಿ 3, ಧಾರವಾಡ 3, ಹಾಸನ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ತಲಾ ಒಂದು ಸಾವು ಸಂಭವಿಸಿದೆ. ಈ ಮೂಲಕ ಸಾವಿನ ಸಂಖ್ಯೆ 335ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಒಟ್ಟಾರೆ ರಾಜ್ಯದಲ್ಲಿ 21,549 ಕೊರೋನ ಸೋಂಕಿತರ ಪೈಕಿ 9,244 ಮಂದಿ ಸಂಪೂರ್ಣ ಗುಣಮುಖ ರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 439 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 335 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 11,966 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Comments are closed.