ಕರಾವಳಿ

ದ.ಕ.ಜಿಲ್ಲೆಯಲ್ಲಿ ಭಾನುವಾರ ಕೊರೋನಾ ಮಹಾಸ್ಫೋಟ- 147 ಪಾಸಿಟಿವ್ ಪತ್ತೆ : ರಾಜ್ಯದಲ್ಲಿ 1925 ಮಂದಿಯಲ್ಲಿಸೋಂಕು ಧೃಢ

Pinterest LinkedIn Tumblr

ಮಂಗಳೂರು, ಜುಲೈ.05 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೊಮ್ಮೆ ಕೊರೋನಾ ಮಹಾಸ್ಫೋಟ ಗೊಂಡಿದ್ದು, ಇಂದು ಮತ್ತೆ ದಾಖಲೆಯ 147 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕರ್ನಾಟಕದಲ್ಲಿ ಪ್ರತಿದಿನದ ಕೊರೋನ ಪಾಸಿಟಿವ್ ಪ್ರಕರಣಗಳ ಪೈಕಿ ಇಂದು ಮತ್ತೊಮ್ಮೆ ಅತೀ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಇಂದು ಮತ್ತೆ ಒಂದೇ ದಿನ ಸೋಂಕಿತರ ಸಂಖ್ಯೆ ಎರಡು ಸಾವಿರದ ಸನಿಹಕ್ಕೆ ಬಂದಿದ್ದು, ಬರೋಬ್ಬರಿ 1925 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಇಂದು ಸೋಂಕಿತರ ಒಟ್ಟು ಸಂಖ್ಯೆ23474ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ರಾಜ್ಯದಲ್ಲಿ ಬುಧವಾರ ಒಂದೇ ದಿನ 1925 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿ ಬರೋಬ್ಬರಿ 147 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಾಗಿ ವರದಿಯಾಗಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 1235, ದಕ್ಷಿಣ ಕನ್ನಡ 147, ಬಳ್ಳಾರಿ 90, ವಿಜಯಪುರ 51, ಕಲಬುರಗಿ 49, ಉಡುಪಿ 45, ಧಾರವಾಡ 45, ಬೀದರ್ 29, ಮೈಸೂರು 25, ಕೊಪ್ಪಳ 22, ಉತ್ತರ ಕನ್ನಡ 21,ಚಾಮರಾಜನಗರ 19, ಹಾವೇರಿ 15, ಹಾಸನ 14, ಚಿಕ್ಕಬಳ್ಳಾಪುರ 13, ತುಮಕೂರು 13, ಕೋಲಾರ 13, ಬೆಳಗಾವಿ 11, ದಾವಣಗೆರೆ 11, ರಾಯಚೂರು 10, ಮಂಡ್ಯ 10, ಚಿಕ್ಕಮಗಳೂರು 9, ಶಿವಮೊಗ್ಗ 8, ಗದಗ 7, ರಾಮನಗರ 6, ಬಾಗಲಕೋಟೆ 4 ಮತ್ತು ಚಿತ್ರದುರ್ಗದಲ್ಲಿ 3 ಪ್ರಕರಣ ಪಾಸಿಟಿವ್ ಬಂದಿದೆ.

ದ.ಕ. ಜಿಲ್ಲೆಯಲ್ಲಿ ಕೊರೋನಾಘಾತ : ದಾಖಲೆಯ 147 ಸೋಂಕಿತರು ಪತ್ತೆ  

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೊಮ್ಮೆ ಕೊರೋನಾ ಮಹಾಸ್ಫೋಟಗೊಂಡಿದ್ದು, ಇಂದು ಮತ್ತೆ ದಾಖಲೆಯ 147 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 1232ಕ್ಕೆ ಏರಿಕೆಯಾಗಿದೆ.

ಇಂದು ಒಟ್ಟು 378 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದ್ದು ಈ ಪೈಕಿ 231 ಮಂದಿಯ ವರದಿ ನೆಗೆಟಿವ್ ಆಗಿದೆ. ಇಂದು ಜಿಲ್ಲೆಯಲ್ಲಿ 38 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ 554 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 666 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರವಿವಾರ ಪತ್ತೆಯಾದ ಪ್ರಕರಣಗಳ ಪೈಕಿ ಪ್ರಾಥಮಿಕ ಸಂಪರ್ಕದಿಂದ 35 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 40 ಮಂದಿಯಲ್ಲಿ ಐಎಲ್ ಐ ಪ್ರಕರಣ ದಾಖಲಾಗಿದೆ. ಇಬ್ಬರಲ್ಲಿ ಸಾರಿ ಪ್ರಕರಣಗಳು ಪತ್ತೆಯಾಗಿವೆ. ಉಳ್ಳಾಲ ಮತ್ತು ಇತರೆಡೆಗಳಲ್ಲಿ ನಡೆದ ರ್‍ಯಾಂಡಮ್ ಪರೀಕ್ಷೆಯಲ್ಲಿ 48 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಒಬ್ಬರಲ್ಲಿ ಪ್ರಿ ಸರ್ಜರಿ ಪ್ರಕರಣಾಗಳು ಪತ್ತೆಯಾಗಿವೆ.

ಸೌದಿ, ಮಸ್ಕತ್, ದುಬೈನಿಂದ ಮರಳಿದ 8 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬೆಂಗಳೂರು, ಮುಂಬೈ, ಬಿಹಾರದಿಂದ ಮರಳಿದ ಒಟ್ಟು 7 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಪ್ರಿ ಸರ್ಜರಿ ಸ್ಯಾಂಪಲ್ ಬಿಫೋರ್ ಡೆಲಿವರಿ ಇಬ್ಬರಲ್ಲಿ, ಪ್ರಿ ಸರ್ಜರಿ ಸ್ಯಾಂಪಲ್ ಬಿಫೋರ್ ಸರ್ಜರಿ ಒಬ್ಬರಲ್ಲಿ, ಪ್ರಿ ಸರ್ಜರಿ ಸ್ಯಾಂಪಲ್ ಬಿಫೋರ್ ಬಯೋಪ್ಸಿ ಒಬ್ಬರಲ್ಲಿ ಹಾಗೂ ಹಡಗಿನ ಮೂಲಕ ಮಲೇಶ್ಯಾದಿಂದ ಮರಳಿದ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Comments are closed.