ಕರಾವಳಿ

ದ.ಕ.ಜಿಲ್ಲೆಯಲ್ಲಿ ಇಂದು 34 ಪಾಸಿಟಿವ್ ಪತ್ತೆ : ರಾಜ್ಯದಲ್ಲಿ 1,843 ಮಂದಿಯಲ್ಲಿಸೋಂಕು ಧೃಢ – 24 ಗಂಟೆಗಳಲ್ಲಿ 30 ಮಂದಿ ಬಲಿ

Pinterest LinkedIn Tumblr

ಮಂಗಳೂರು, ಜುಲೈ.06 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 34 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕರ್ನಾಟಕದಲ್ಲಿ ಇಂದು ಮತ್ತೆ ಒಂದೇ ದಿನ ಬರೋಬ್ಬರಿ 1,843 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಇಂದು ಸೋಂಕಿತರ ಒಟ್ಟು ಸಂಖ್ಯೆ 25,317ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ರಾಜ್ಯದಲ್ಲಿ ಸೋಮವಾರ ಒಂದೇ ದಿನ 1,843 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿ ಬರೋಬ್ಬರಿ 34 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಾಗಿ ವರದಿಯಾಗಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 981, ಬಳ್ಳಾರಿ 99, ಉತ್ತರ ಕನ್ನಡ 81, ಬೆಂಗಳೂರು ಗ್ರಾಮಾಂತರ 68, ಧಾರವಾಡ 56, ಕಲಬುರಗಿ 53, ಹಾಸನ 49, ಮೈಸೂರು 45, ಬೀದರ್ 44, ಉಡುಪಿ 40, ಮಂಡ್ಯ 39, ವಿಜಯಪುರ 36, ಯಾದಗಿರಿ 35, ದಕ್ಷಿಣ ಕನ್ನಡ 34, ಬಾಗಲಕೋಟೆ 33, ತುಮಕೂರು 31, ಶಿವಮೊಗ್ಗ 24, ಗದಗ 18, ಚಾಮರಾಜನಗರ 12, ರಾಮನಗರ 11, ಕೋಲಾರ 10, ಹಾವೇರಿ 9, ಕೊಪ್ಪಳ 9, ಚಿಕ್ಕಬಳ್ಳಾಪುರ 7, ರಾಯಚೂರು 6, ಚಿತ್ರದುರ್ಗ 6, ದಾವಣಗೆರೆ 3, ಚಿಕ್ಕಮಗಳೂರು ಮತ್ತು ಕೊಡಗು ತಲಾ 2 ಪ್ರಕರಣ ಪಾಸಿಟಿವ್ ಬಂದಿದೆ.

ದ.ಕ.ಜಿಲ್ಲೆಯಲ್ಲಿ ತಗ್ಗಿದ್ದ ಸೋಂಕಿತರ ಸಂಖ್ಯೆ : ಇಂದು ಸೋಂಕಿಗೆ ಇಬ್ಬರು ಬಲಿ

ದ.ಕ. ಜಿಲ್ಲೆಯಲ್ಲಿ ಸೋಮವಾರ 34 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದೇ ವೇಳೆ ಕೋವಿಡ್ ಆಸ್ಪತ್ರೆಯಿಂದ ಇಂದು 30 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದ.ಕ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 1276 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ಪೈಕಿ 584 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 667 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯ ತನಕ 24 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ರಾಜ್ಯದಲ್ಲಿ ಕೊರೋನಾ ಸೋಂಕಿಗೆ 24 ಗಂಟೆಗಳಲ್ಲಿ 30 ಮಂದಿ ಬಲಿ :

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 30 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದುವರೆಗೆ ಅತೀ ಹೆಚ್ಚಿನ ಕೊರೋನ ಸಾವು ಪ್ರಕರಣ ದಾಖಲಾದ ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು 10 ಮಂದಿ ಸಾವನ್ನಪ್ಪಿದ್ದಾರೆ. ಉಳಿದಂತೆ ಬೀದರ್ 8, ಮೈಸೂರು 3, ದಕ್ಷಿಣ ಕನ್ನಡ 2, ದಾವಣಗೆರೆ, ಬಳ್ಳಾರಿ, ಹಾಸನ, ಕೊಡಗು, ಬಾಗಲಕೋಟೆ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಯಲ್ಲಿ ತಲಾ ಒಂದು ಸಾವು ಸಂಭವಿಸಿದೆ. ಈ ಮೂಲಕ ಸಾವಿನ ಸಂಖ್ಯೆ 401ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಒಟ್ಟಾರೆ ರಾಜ್ಯದಲ್ಲಿ 25,317 ಕೊರೋನ ಸೋಂಕಿತರ ಪೈಕಿ 10,527 ಮಂದಿ ಸಂಪೂರ್ಣ ಗುಣಮುಖ ರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 680 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 401 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 14,385 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Comments are closed.