ಕರಾವಳಿ

ಉಡುಪಿ ಜಿಲ್ಲೆ ಸದ್ಯಕ್ಕೆ ಲಾಕ್ ಡೌನ್ ಮಾಡುವ ಅಗತ್ಯವಿಲ್ಲ: ಶಾಸಕ ಕೆ. ರಘುಪತಿ ಭಟ್

Pinterest LinkedIn Tumblr

ಉಡುಪಿ: ಹೊರಗಿನಿಂದ ಬರುತ್ತಿರುವರಲ್ಲಿ ಮಾತ್ರವೇ ಕೊರೋನಾ‌ ಪ್ರಕರಣಗಳು‌ ಜಾಸ್ಥಿಯಾಗುತ್ತಿದ್ದು ಉಡುಪಿ ಗಡಿ ಬಂದ್ ಮಾಡುವ ಸಲಹೆ ನೀಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ನಿಯಂತ್ರಣಕ್ಕಾಗಿ ಸದ್ಯಕ್ಕೆ ಲಾಕ್ ಡೌನ್ ಅಗತ್ಯವಿಲ್ಲ. ಜಿಲ್ಲೆಯ ಒಳಗಡೆ ಪರಿಸ್ಥಿತಿಯನ್ನು ನಿಯಂತ್ರಿಸಬಹುದಾಗಿದೆ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಡುಪಿ ಜಿಲ್ಲೆಯಲ್ಲಿ ಜನಜೀವನ ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಮತ್ತೆ ಲಾಕ್ ಡೌನ್ ಮಾಡಿದರೆ ಆರ್ಥಿಕತೆಯ ಮೇಲೆ ಭಾರಿ ಹೊಡೆತ ಬೀಳಲಿದೆ. ಉಡುಪಿ ಜಿಲ್ಲೆಯ ಗಡಿ ಭಾಗಗಳನ್ನು ಮತ್ತೆ ಸೀಲ್ ಡೌನ್ ಮಾಡಲು ಜಿಲ್ಲಾಧಿಕಾರಿ ಅವರಿಗೆ ಸಲಹೆ ನೀಡಿದ್ದೇನೆ. ಹೊರ ಜಿಲ್ಲೆಯಿಂದ ಬರುತ್ತಿರುವವರನ್ನು ಗೃಹ ದಿಗ್ಬಂಧನಕ್ಕೊಳಪಡಿಸಬೇಕು ಆಗ ಸೋಂಕು ಹರಡುವುದು ನಿಯಂತ್ರಣಕ್ಕೆ ಬರುತ್ತದೆ ಎಂದು ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Comments are closed.