ಕರಾವಳಿ

ಕೊರೋನಾ ಎಫೆಕ್ಟ್ :ಮಂಗಳೂರಿನ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ಸರಳ ರೀತಿಯಲ್ಲಿ ನಡೆದ ಶ್ರೀ ವರಮಹಾಲಕ್ಷ್ಮಿ ಪೂಜೆ

Pinterest LinkedIn Tumblr

ಮಂಗಳೂರು, ಜುಲೈ.31 : ನಾಡಿನಾದ್ಯಂತ ಇಂದು ಶ್ರೀ ವರಮಹಾಲಕ್ಷ್ಮಿ ಪೂಜೆಯ ಸಂಭ್ರಮ. ಆದರೆ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಯಾವೂದೇ ಕ್ಷೇತ್ರಗಳಲ್ಲಿ ಸಾರ್ವಜನಿಕವಾಗಿ ವರಮಹಾಲಕ್ಷ್ಮಿ ಪೂಜೆ ಸೇರಿದಂತೆ ಯಾವೂದೇ ಹಬ್ಬಗಳನ್ನು ಆಚರಿಸದಂತೆ ಸರ್ಕಾರದಿಂದ ಆದೇಶವಾಗಿರುವುದರಿಂದ ಕೆಲವೊಂದು ಕ್ಷೇತ್ರಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಸರಳವಾಗಿ ಶ್ರೀ ವರಮಹಾಲಕ್ಷ್ಮಿ ಪೂಜೆಯನ್ನು ನೆರವೇರಿಸಲಾಯಿತು.

ಮಂಗಳೂರಿನ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಪಟ್ಟೆ ಲಿಂಗಪ್ಪ ಆಚಾರ್ಯ ಕಲ್ಯಾಣ ಮಂಟಪದಲ್ಲಿ ಶ್ರೀ ಸುದರ್ಶನ ಪುರೋಹಿತರ ಆಚಾರ್ಯತ್ವದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯು ಇಂದು ಬೆಳಿಗ್ಗೆ ಸರಳ ರೀತಿಯಲ್ಲಿ ನಡೆಯಿತು.

ಸರ್ಕಾರದ ಮಾರ್ಗಸೂಚಿಯಂತೆ ಮಾಸ್ಕ್ ಧರಿಸಿ ನಡೆದ ವರಮಹಾಲಕ್ಷ್ಮಿ ಪೂಜೆ ಆಚರಣೆಯಲ್ಲಿ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಕೆ ಕೇಶವ ಆಚಾರ್ಯ, ಮೊಕ್ತೇಸರರಾದ ಸುಂದರ ಆಚಾರ್ಯ, ಎ ಲೋಕೇಶ್ ಆಚಾರ್ಯ ಬಿಜೈ , ಆಡಳಿತ ಮಂಡಳಿಯ ಸದಸ್ಯರು, ಜೀರ್ಣೋದ್ದಾರ ಸಮಿತಿಯ ಸದಸ್ಯರು ಹಾಗೂ ವಿಶ್ವಬ್ರಾಹ್ಮಣ ಮಹಿಳಾ ಸಮಿತಿಯ ಸದಸ್ಯರು, ಭಕ್ತಾಧಿಗಳು ಪಾಲ್ಗೊಂಡಿದ್ದರು.

Comments are closed.