ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಕೊರೋನಾ ಮಹಾ ಸ್ಫೋಟ ಗೊಂಡಿದ್ದು, ಶುಕ್ರವಾರ 204 ಮಂದಿಗೆ ಸೋಂಕು ಧೃಢಪಟ್ಟಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.
ಶುಕ್ರವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಪ್ರಕಟಿಸಿದ ಪ್ರಕಟಣೆಯಲ್ಲಿ ದ.ಕ. ಜಿಲ್ಲೆಯಲ್ಲಿ 204 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ.
ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸೋಂಕು ಪೀಡಿತರ ಸಖ್ಯೆ ದಿಢೀರ್ ಏರಿಕೆಯಾಗಿದ್ದು, ಗುರುವಾರ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5506 ಇತ್ತು. ಆದರೆ ಶುಕ್ರವಾರ ಮತ್ತೆ 204 ಮಂದಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 5713ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಏಕಾಏಕಿ ಸೋಂಕು ಹರಡುವ ಸ್ವರೂಪವೇ ಬದಲಾಗಿಬಿಟ್ಟಿದೆ. ಆತಂಕಕಾರಿ ವಿಚಾರವೆಂದರೆ ಸೋಂಕಿನ ಮೂಲವೇ ಪತ್ತೆಯಾಗದವರ ಸಂಖ್ಯೆ ( 52 ) ಮತ್ತೆ ಮುಂದುವರಿದಿದೆ.
ಶುಕ್ರವಾರದಂದು ಮತ್ತೆ 70 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಜಿಲ್ಲೆಯಲ್ಲಿ ಇಲ್ಲಿಯ ತನಕ 2631 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ 2929 ಮಂದಿ ಜಿಲ್ಲೆಯಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಶುಕ್ರವಾರ ಪತ್ತೆಯಾದ ಸೋಂಕಿತರ ಪೈಕಿ 75 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 63 ಮಂದಿಯಲ್ಲಿ ಐಎಲ್ ಐ ಪ್ರಕರಣ ಪತ್ತೆಯಾಗಿದೆ. 14 ಮಂದಿಯಲ್ಲಿ ಸಾರಿ ಪ್ರಕರಣ ದೃಢಪಟ್ಟಿದೆ. 52 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಇನ್ನು ಇಂದು ಕೂಡಾ ಕೊರೋನಾ ಮಾಹಾಮಾರಿಗೆ 5 ಮಂದಿ ಬಲಿಯಾಗಿದ್ದಾರೆ.
ಶುಕ್ರವಾರದ ಪ್ರಮುಖ ಅಂಶಗಳು :
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೊರೋನಾ ಮಹಾಸ್ಫೋಟ
ನಿನ್ನೆ 204 ಮಂದಿಗೆ ಕೊರೋನಾ ಪಾಸಿಟಿವ್
ಶುಕ್ರವಾರ 5 ಮಂದಿ ಕೊರೋನಾ ಮಹಾಮಾರಿಗೆ ಬಲಿ
ಪ್ರಾಥಮಿಕ ಸಂಪರ್ಕದಿಂದ 75 ಮಂದಿಗೆ ಕೊರೋನಾ ಪಾಸಿಟಿವ್
ILI ಪ್ರಕರಣದಿಂದ 63 ಮಂದಿಗೆ ಕೊರೋನಾ ಪಾಸಿಟಿವ್
ಸಂಪರ್ಕವೇ ಪತ್ತೆಯಾಗದ 52 ಮಂದಿಗೆ ಕೊರೋನಾ ಪಾಸಿಟಿವ್
SARI ಪ್ರಕರಣದಿಂದ 14 ಮಂದಿಗೆ ಕೊರೋನಾ ಪಾಸಿಟಿವ್
ಜಿಲ್ಲೆಯಲ್ಲಿ ನಿಲ್ಲದ ಕೊರೋನಾ ಅಟ್ಟಹಾಸ
ಗ್ರಾಮೀಣ ಪ್ರದೇಶಕ್ಕೂ ವ್ಯಾಪಿಸಿದ ಕೊರೋನಾ ಮಹಾಮಾರಿ.
Comments are closed.