ಕರಾವಳಿ

ಮನಪಾ ಆಯುಕ್ತರಿಗೆ ದಿಢೀರ್ ವರ್ಗಾವಣೆ : ಪಾಲಿಕೆ ವತಿಯಿಂದ ಬೀಳ್ಕೊಡುಗೆ

Pinterest LinkedIn Tumblr

ಮಂಗಳೂರು, ಆಗಸ್ಟ್.06: ಬುಧವಾರ ದಿಢೀರ್ ವರ್ಗಾವಣೆಗೊಂಡಿರುವ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಅವರಿಗೆ ಮನಪಾ ಸಭಾಂಗಣದಲ್ಲಿ ಬುಧವಾರ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ಮೇಯರ್ ದಿವಾಕರ್ ಪಾಂಡೇಶ್ವರ್, ಉಪಾಯುಕ್ತ ಡಾ. ಸಂತೋಷ್ ಕುಮಾರ್, ಮನಪಾ ಸದಸ್ಯರು ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

ದಿಢೀರ್ ವರ್ಗಾವಣೆ!

ಮನಪಾ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಅವರಿಗೆ ಕೊರೋನ ಪಾಸಿಟಿವ್ ಕಾಣಿಸಿಕೊಂಡ ಬಳಿಕ ವಿಶ್ರಾಂತಿಯಲ್ಲಿದ್ದರು. ಈ ಸಂದರ್ಭದಲ್ಲಿ ಮುಡಾ ಆಯುಕ್ತ ದಿನೇಶ್ ಅವರು ಮನಪಾ ಆಯುಕ್ತ ಹುದ್ದೆಯ ಪ್ರಭಾರ ವಹಿಸಿದ್ದರು.

ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಅವರಿಗೆ ಬುಧವಾರ ದಿಢೀರ್ ವರ್ಗಾವಣೆ ಆದೇಶ ಬಂದಿದ್ದು, ಅಜಿತ್ ಕುಮಾರ್ ಹೆಗ್ಡೆ ಅವರನ್ನು ಆಲಮಟ್ಟಿ ಕೃಷ್ಣಭಾಗ್ಯ ಜಲ ನಿಗಮದ ಪ್ರಭಾರ ಮುಖ್ಯ ಲೆಕ್ಕಾಧಿಕಾರಿ ಹುದ್ದೆಗೆ ವರ್ಗಾಯಿಸಲಾಗಿದೆ. ತೆರವಾದ ಅವರ ಮನಪಾ ಕಮಿಷನರ್ ಸ್ಥಾನಕ್ಕೆ ಇದುವರೆಗೆ ಯಾರನ್ನೂ ನೇಮಿಸಿಲ್ಲ.

Comments are closed.