ಮಂಗಳೂರು, ಆಗಸ್ಟ್.07: : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದ ಒಂದೇ ದಿನ ಕೊರೋನಾ ಸೋಂಕಿಗೆ ಬರೋಬ್ಬರಿ 11 ಮಂದಿ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಗಣನೀಯ ವಾಗಿಯೇ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಇದುವರೆಗೆ ಕೊರೋನಕ್ಕೆ ಬಲಿಯಾದವರ ಒಟ್ಟು ಸಂಖ್ಯೆ 201ಕ್ಕೆ ಏರಿಕೆಯಾಗಿದೆ.
ದ.ಕ. ಜಿಲ್ಲೆಯಲ್ಲಿ ಹೊಸದಾಗಿ ಸೋಂಕು ಪತ್ತೆಯಾದವರ ಸಂಖ್ಯೆ ಕೊಂಚ ಇಳಿಕೆಯಾಗಿದ್ದರೂ, ಕೊರೋನ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ 11 ಮಂದಿ ಕೊರೋನ ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಪೈಕಿ ಆರು ಮಂದಿ ಮಂಗಳೂರು ತಾಲೂಕಿನವರೇ ಆಗಿದ್ದರೆ, ಬಂಟ್ವಾಳದ ಇಬ್ಬರು, ಹೊರಜಿಲ್ಲೆಯ ಮೂವರು ಮೃತಪಟ್ಟಿದ್ದಾರೆ. ಇವರೆಲ್ಲರೂ ಕೊರೋನ ಸೋಂಕಿನ ಜತೆಗೆ ಇತರ ಗಂಭೀರ ಕಾಯಿಲೆಗಳಿಂದಲೂ ಬಳಲುತ್ತಿದ್ದರು ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
ಗುರುವಾರದ ಪ್ರಮುಖ ಅಂಶಗಳು :
ಜಿಲ್ಲೆಯಲ್ಲಿ ಗುರುವಾರದಂದು ಬರೋಬ್ಬರಿ 11 ಮಂದಿ ಕೊರೋನಾ ಮಹಾಮಾರಿಗೆ ಬಲಿ
ಮೃತರಲ್ಲಿ 6 ಮಂದಿ ಮಂಗಳೂರು ನಿವಾಸಿಗಳು
ಬಂಟ್ವಾಳದ ಇಬ್ಬರು ಹಾಗೂ ಹೊರ ಜಿಲ್ಲೆಯ ಮೂವರು ಕೊರೋನಾಗೆ ಬಲಿ
ಕೊರೋನಾಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 201ಕ್ಕೆ ಏರಿಕೆ
ದ.ಕ ಜಿಲ್ಲೆಯಲ್ಲಿ 200ರ ಗಡಿ ದಾಟಿದ ಕೊರೋನಾ ಸಾವು.
Comments are closed.