ಕರಾವಳಿ

ಮಳೆ ಹಾನಿ ಬಗ್ಗೆ ಸಭೆ: ಕಂದಾಯ ಸಚಿವ ಆರ್. ಅಶೋಕ್ ನಾಳೆ ಮಂಗಳೂರಿಗೆ..

Pinterest LinkedIn Tumblr

ಮಂಗಳೂರು ಆಗಸ್ಟ್ 07 : ಕಂದಾಯ ಸಚಿವ ಆರ್. ಅಶೋಕ್ ಅವರು ನಾಳೆ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲ್ಲಿದು ಅವರ ಜಿಲ್ಲಾ ಪ್ರವಾಸದ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಈಗಾಗಲೇ ಉಡುಪಿ ಜಿಲ್ಲೆಗೆ ಆಗಮಿಸಿರುವ ಕಂದಾಯ ಸಚಿವ ಆರ್. ಅಶೋಕ್ ಅವರು ಆಗಸ್ಟ್ 8 ರಂದು ಉಡುಪಿಯಿಂದ ಆಗಮಿಸಿ, ಬೆಳಿಗ್ಗೆ 11 ಗಂಟೆಗೆ ದ.ಕ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿರುವ ಮಳೆ ಹಾನಿ ಪರಿಹಾರ ಕಾರ್ಯ ಸಂಬಂಧ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು.

ಮಧ್ಯಾಹ್ನ 12.45 ಗಂಟೆಗೆ ಮಂಗಳೂರಿಂದ ವಿಮಾನದ ಮೂಲಕ ಕೇಂದ್ರ ಸ್ಥಾನಕ್ಕೆ ತೆರಳುವರು.

Comments are closed.