ಕರಾವಳಿ

ಮಂಗಳೂರು: ಸಂಚಾರ ಮತ್ತು ಅಪರಾಧ ವಿಭಾಗದ ನೂತನ ಡಿಸಿಪಿಯಾಗಿ ವಿನಯ್ ಗಾಂವ್ಕರ್ ನಿಯುಕ್ತಿ

Pinterest LinkedIn Tumblr

ಮಂಗಳೂರು : ಮಂಗಳೂರು ನಗರ ಸಂಚಾರ ಮತ್ತು ಅಪರಾಧ ವಿಭಾಗದ ನೂತನ ಡಿಸಿಪಿಯಾಗಿ ವಿನಯ್ ಗಾಂವ್ಕರ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಮಾಡಿದೆ.

ನಗರ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಲಕ್ಷ್ಮೀಗಣೇಶ್ ಅವರನ್ನು ಬೆಂಗಳೂರಿಗೆ ವರ್ಗಾವಣೆಗೊಳಿಸಲಾಗಿದ್ದು, ತೆರವಾದ ಅವರ ಸ್ಥಾನಕ್ಕೆ ಉಪಪೊಲೀಸ್ ಆಯುಕ್ತರಾಗಿ ವಿನಯ್ ಗಾಂವ್ಕರ್ ಅವರನ್ನು ನೇಮಕಗೊಳಿಸಲಾಗಿದೆ.

ರಾಜ್ಯ ಪೊಲೀಸ್ ಇಲಾಖೆಯ ಐಪಿಎಸ್, ನಾನ್ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಶುಕ್ರವಾರ ನಡೆದಿದ್ದು, ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ಲಕ್ಷ್ಮೀ ಗಣೇಶ್ ಸೇರಿದಂತೆ 8 ಅಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿದೆ.

ವಿನಯ್ ಗಾಂವ್ಕರ್ ಅವರಿಗೆ ಇತ್ತೀಚೆಗಷ್ಟೇ ಪದೋನ್ನತಿಯಾಗಿದ್ದು, ಯಾವುದೇ ಹುದ್ದೆ ನೀಡಿರಲಿಲ್ಲ. ಲಕ್ಷ್ಮೀ ಗಣೇಶ್ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸ್ಥಾನಕ್ಕೆ ವರ್ಗಾಯಿಸಲಾಗಿದೆ.

Comments are closed.