ಕರಾವಳಿ

ಕಲ್ಕೂರ ಪ್ರತಿಷ್ಠಾನದಿಂದ ಕರಸೇವಕರಿಗೆ ಕಲ್ಕೂರ ಪೇಜಾವರ ಪ್ರಶಸ್ತಿ ಪ್ರದಾನ

Pinterest LinkedIn Tumblr

ಮಂಗಳೂರು : ನಗರದ ಕಲ್ಕೂರ ಪ್ರತಿಷ್ಠಾನದಿಂದ ಕರಸೇವಕರಿಗೆ ಕಲ್ಕೂರ ಪೇಜಾವರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇತ್ತೀಚಿಗೆ ಮಂಗಳೂರಿನಲ್ಲಿ ಜರಗಿತು.

ಪೂಜ್ಯ ವಿಶ್ವೇಶತೀರ್ಥ ಸ್ವಾಮೀಜಿಯವರ ಸಂಸ್ಮರಣೆಯೊಂದಿಗೆ ಮತ್ತು ಪೂಜ್ಯರ ಶ್ರೀ ರಾಮ ಮಂದಿರ ಪುನರ್‌ನಿರ್ಮಾಣದ ಸಂಕಲ್ಪ ಮತ್ತು ಆಶಯದ ಸಾಕ್ಷಾತ್ಕಾರಕ್ಕಾಗಿ ಪ್ರಸ್ತುತ ಪೇಜಾವರ ಮಠಾಧೀಶರೂ, ಅಯೋಧ್ಯೆ ಶ್ರೀ ರಾಮ ಮಂದಿರ ನ್ಯಾಸ ಟ್ರಸ್ಟ್‌ನ ವಿಶ್ವಸ್ಥರೂ ಆಗಿರುವ ಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥರ ಅಶೀರ್ವಾದದೊಂದಿಗೆ, ಕದ್ರಿ ಕಂಬಳ ರಸ್ತೆ, ಮಲ್ಲಿಕಾ ಬಡಾವಣೆಯಲ್ಲಿರುವ ಮಂಜು ಪ್ರಾಸಾದದಲ್ಲಿನ ವಾದಿರಾಜ ಮಂಟಪದಲ್ಲಿ ಕಲ್ಕೂರ ಪ್ರತಿಷ್ಠಾನದ ವತಿಯಿಂದ ಏರ್ಪಡಿಸಲಾಗಿದ್ದ ‘ವಿಷ್ಣು ಸಹಸ್ರನಾಮ ಯಾಗ’ದ ಸಂದರ್ಭ ಅಯೋಧ್ಯಾ ಶ್ರೀ ರಾಮ ಜನ್ಮಭೂಮಿ ಮುಕ್ತಿ ಹೋರಾಟದಲ್ಲಿ ಕರಸೇವಕರಾಗಿ ಪಾಲ್ಗೊಂಡಿದ್ದ ಜಯಂತ್ ಉಳ್ಳಾಲ್ ಹಾಗೂ ಶ್ರೀ ವೇಣುಗೋಪಾಲ ಭಟ್ ಅವರಿಗೆ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ರವರು ಕಲ್ಕೂರ ಪೇಜಾವರ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭ ವೇದ ವಿದ್ವಾನ್ ಪಂಜ ಭಾಸ್ಕರ ಭಟ್, ಕದ್ರಿ ಶ್ರೀರಂಗ ಐತಾಳ್, ವೆ. ಮೂ. ಸತ್ಯಕೃಷ್ಣ ಭಟ್, ಎಂ. ಬಿ. ಪುರಾಣಿಕ್, ಡಾ. ಎಂ. ಪ್ರಭಾಕರ ಜೋಶಿ, ಪೊಳಲಿ ನಿತ್ಯಾನಂದ ಕಾರಂತ, ಕದ್ರಿ ನವನೀತ ಶೆಟ್ಟಿ, ಸುಧಾಕರ ರಾವ್ ಪೇಜಾವರ ಮೊದಲಾದವರು ಉಪಸ್ಥಿತರಿದ್ದರು.

Comments are closed.