ಕರಾವಳಿ

ಕೋಟದ ಬನ್ನಾಡಿಯಲ್ಲಿ ಮನೆ ಕಳ್ಳತನ: ಪೊಲೀಸರಿಂದ ವಿಜಯಪುರ ಮೂಲದ ಆರೋಪಿ ಸೆರೆ

Pinterest LinkedIn Tumblr

ಉಡುಪಿ: ಕಳೆದ ನಾಲ್ಕು ದಿನಗಳ ಹಿಂದೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನಾಡಿ ಎಂಬಲ್ಲಿ ಪ್ರಾಣೇಶ್ ಎನ್ನುವರ ಮನೆಯ ಹೆಂಚು ತೆಗೆದು ಒಳಗೆ ಹೋಗಿ ಚಿನ್ನಾಭರಣ ಹಾಗೂ ಮೊಬೈಲ್ ಫೋನನ್ನು ಕಳವುಗೈದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಇಂಡಿ ತಾಲೂಕಿನ ಅಮಿತ ಶಾಂತಪ್ಪ ನಾಗನಾಸುರ್ (21) ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ 23 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 4000 ರೂಪಾಯಿ ಮೌಲ್ಯದ 3 ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಆ.8 ರಂದು ಈ ಕಳ್ಳತನ ನಡೆದಿದ್ದು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಡುಪಿ ಎಸ್ಪಿ ವಿಷ್ಣುವರ್ಧನ್ ಆದೇಶದಂತೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಮಾರ್ಗದರ್ಶನದಂತ, ಉಡುಪಿ ಪೊಲೀಸ್ ಉಪಾಧೀಕ್ಷಕ ಟಿ.ಜೈಶಂಕರ್, ಬ್ರಹ್ಮವಾರ ಪೊಲೀಸ್ ವೃತ್ತ ನಿರೀಕ್ಷಕ ಅನಂತಪದ್ಮನಾಭ ಅವರ ನಿರ್ದೇಶನದಂತೆ, ಕೋಟ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಉಪ ನಿರೀಕ್ಷಕಿ ಪುಷ್ಪ ಹಾಗೂ ಕಾನೂನು ಸುವ್ಯವಸ್ಥೆಯ ಪಿಎಸ್ಐ ಸಂತೋಷ್ ಬಿ.ಪಿ ನೇತ್ರತ್ವದಲ್ಲಿ ಕೋಟ ಪೊಲೀಸ್ ಠಾಣಾ ಅಪರಾಧ ಪತ್ತೆದಳದ ಸಿಬ್ಬಂದಿಗಳಾದ ಸುರೇಶ ಎಚ್, ಪ್ರಕಾಶ್ ಎಸ್ ಮತ್ತು ರಾಜೇಶ್ ಅವರು ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

Comments are closed.