
ಮಂಗಳೂರು, ಆಗಸ್ಟ್.14 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಮತ್ತೆ 246 ಮಂದಿಗೆ ಸೋಂಕು ಧೃಢಪಟ್ಟಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಗುರುವಾರ ಸೋಂಕಿತರ ಸಂಖ್ಯೆ 8 ಸಾವಿರ ದಾಟಿದೆ.
ಗುರುವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಪ್ರಕಟಿಸಿದ ಪ್ರಕಟಣೆಯಲ್ಲಿ ದ.ಕ. ಜಿಲ್ಲೆಯಲ್ಲಿ 246 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ.
ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸೋಂಕು ಪೀಡಿತರ ಸಖ್ಯೆ ದಿಢೀರ್ ಏರಿಕೆಯಾಗಿದ್ದು,ಗುರುವಾರ ಮತ್ತೆ 246 ಮಂದಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 8071ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಏಕಾಏಕಿ ಸೋಂಕು ಹರಡುವ ಸ್ವರೂಪವೇ ಬದಲಾಗಿಬಿಟ್ಟಿದೆ. ಆತಂಕಕಾರಿ ವಿಚಾರವೆಂದರೆ ಸೋಂಕಿನ ಮೂಲವೇ ಪತ್ತೆಯಾಗದವರ ಸಂಖ್ಯೆ ( 97 )ಮತ್ತೆ ಮುಂದುವರಿದಿದೆ.
ದ.ಕ. ಜಿಲ್ಲೆಯಲ್ಲಿಗುರುವಾರದಂದು ಪತ್ತೆಯಾದ ಸೋಂಕಿತರಿಗಿಂತಲೂ ಅಧಿಕ ಸಂಖ್ಯೆಯಲ್ಲಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಗುರುವಾರದಂದು ಒಂದೇ ದಿನ 641 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಗುರುವಾರ ಪತ್ತೆಯಾದ ಪ್ರಕರಣಗಳ ಪೈಕಿ103 ಐಎಲ್ ಐ ಪ್ರಕರಣಗಳಾಗಿವೆ. 10 ಸಾರಿ ಪ್ರಕರಣಗಳಾಗಿವೆ. 36 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 97 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.
ಜಿಲ್ಲೆಯಲ್ಲಿ ಇಲ್ಲಿಯ ತನಕ 8071 ಮಂದಿಯಲ್ಲಿ ಸೋಂಕು ಪತ್ತೆಯಾದಂತಾಗಿದೆ. ಇನ್ನು ಇಲ್ಲಿಯ ತನಕ ಒಟ್ಟು 5873 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1948 ಮಂದಿ ಜಿಲ್ಲೆಯಲ್ಲಿ ಸದ್ಯ ಚಿಕಿತ್ಸೆಪಡೆಯುತ್ತಿದ್ದಾರೆ. ಇನ್ನು ಗುರುವಾರದಂದು ಮತ್ತೆ 6 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಇಲ್ಲಿಯ ತನಕ ಮೃತಪಟ್ಟವರ ಒಟ್ಟು ಸಂಖ್ಯೆ 250ಕ್ಕೆ ಏರಿಕೆಯಾಗಿದೆ.
ಗುರುವಾರದ ಪ್ರಮುಖ ಅಂಶಗಳು :
ಜಿಲ್ಲೆಯಲ್ಲಿ ನಿಲ್ಲದ ಕೊರೋನಾ ಅಟ್ಟಹಾಸ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಬರೋಬ್ಬರಿ 246 ಮಂದಿಗೆ ಕೊರೋನಾ ಪಾಸಿಟಿವ್
ಗುರುವಾರ ಮಂಗಳೂರು ತಾಲೂಕಿನ 150 ಮಂದಿಗೆ ಕೊರೋನಾ ಪಾಸಿಟಿವ್
ಬಂಟ್ವಾಳ 47, ಪುತ್ತೂರು 16, ಬೆಳ್ತಂಗಡಿ 15, ಸುಳ್ಯ 7 ಹಾಗೂ ಹೊರ ಜಿಲ್ಲೆಯಿಂದ ಬಂದ 11 ಮಂದಿಗೆ ಕೊರೋನಾ ಪಾಸಿಟಿವ್
ILI ಪ್ರಕರಣದಿಂದ 103 ಮಂದಿಗೆ ಕೊರೋನಾ ಪಾಸಿಟಿವ್
ಸಂಪರ್ಕವೇ ಪತ್ತೆಯಾಗದ 97 ಮಂದಿಗೆ ಕೊರೋನಾ ಪಾಸಿಟಿವ್
ಪ್ರಾಥಮಿಕ ಸಂಪರ್ಕದಿಂದ 36 ಮಂದಿಗೆ ಕೊರೋನಾ ಪಾಸಿಟಿವ್
SARI ಪ್ರಕರಣದಿಂದ 10 ಮಂದಿಗೆ ಕೊರೋನಾ ಪಾಸಿಟಿವ್
ಗುರುವಾರ ಜಿಲ್ಲೆಯಲ್ಲಿ 641 ಮಂದಿ ಗುಣಮುಖ
ಗುರುವಾರ ಕೂಡಾ 6 ಮಂದಿ ಕೊರೋನಾ ಮಹಾಮಾರಿಗೆ ಬಲಿ
ಕೊರೋನಾಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ ಬರೋಬ್ಬರಿ 250ಕ್ಕೆ ಏರಿಕೆ
ಮಂಗಳೂರಿನ 3, ಬಂಟ್ವಾಳದ 1 ಹಾಗೂ ಹೊರ ಜಿಲ್ಲೆಯ ಇಬ್ಬರು ಸಾವು.
Comments are closed.