ಕರಾವಳಿ

ಮಂಗಳೂರು: ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ಮಂಗಳ ಗೌರಿ ಪೂಜೆ

Pinterest LinkedIn Tumblr

ಮಂಗಳೂರು, ಆಗಸ್ಟ್.19: ಶ್ರೀ ವಿಶ್ವಬ್ರಾಹ್ಮಣ ಮಹಿಳಾ ಸಮಿತಿ ವತಿಯಿಂದ ಶ್ರೀ ಮಂಗಳಗೌರಿ ಪೂಜೆ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ಆಗಸ್ಟ್ 18ರಂದು ಸಂಜೆ ಕ್ಷೇತ್ರದ ಅರ್ಚಕರಾದ ವಿಘ್ನೇಶ್ ಪುರೋಹಿತರ ಪ್ರಧಾನ ಆಚಾರ್ಯತ್ವದಲ್ಲಿ ಜರಗಿತು.

ಮಂಗಳಗೌರಿ ದೇವರ ಬೆಳ್ಳಿಯ ಮುಖ ಕವಚವನ್ನು ಕಲಶ ದಲ್ಲಿರಿಸಿ ವಿಶೇಷ ಅಲಂಕಾರದೊಂದಿಗೆ ಪೂಜೆ ಸಂಪನ್ನಗೊಂಡಿತು . ವಿಶ್ವಬ್ರಾಹ್ಮಣ ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ವನಿತಾ ಉಪೇಂದ್ರ ಆಚಾರ್ಯ, ಮಹಿಳಾ ಸಮಿತಿಯ ಪದಾಧಿಕಾರಿಗಳು, ಸದಸ್ಯೆಯರು ಭಾಗವಹಿಸಿದ್ದರು.

ಮಹಿಳೆಯರಿಗೆ ವಾಯನ ದಾನ ನೀಡಲಾಯಿತು. ಕ್ಷೇತ್ರದ ಆಡಳಿತ ಮೊಕ್ತೇಸರರಾದ ಕೆ. ಕೇಶವ ಆಚಾರ್ಯ, ಮೊಕ್ತೇಸರರಾದ ಸುಂದರ ಆಚಾರ್ಯ ಬೆಳುವಾಯಿ, ಎ. ಲೋಕೇಶ್ ಆಚಾರ್ಯ ಬಿಜೈ, ಆಡಳಿತ ಮಂಡಳಿ ಹಾಗು ಜೀರ್ಣೋದ್ದಾರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಕೊರೊನ ಆತಂಕದ ಹಿನ್ನೆಲೆಯಲ್ಲಿ ಈ ಬಾರಿಯ ಮಂಗಳ ಗೌರಿ ಪೂಜೆ ಹೆಚ್ಚು ಜನ ಸೇರದೆ ಸರಳ ರೀತಿಯಲ್ಲಿ ಆಚರಿಸಲಾಯಿತು.

Comments are closed.