ಕರಾವಳಿ

ಸಾರ್ವನಿಕ ಸ್ಥಳಗಳಲ್ಲಿ ತಂಬಾಕು ಜಗಿದು ಉಗಿಯುತ್ತಿದ್ದವರ ವಿರುದ್ಧ ಕೇಸ್ : ರೂ. 2100 ದಂಡ ವಸೂಲ್

Pinterest LinkedIn Tumblr

ಮಂಗಳೂರು ಆಗಸ್ಟ್ 22: ನಗರದ ಉರ್ವಾಸ್ಟೋರ್ ಬಳಿ ಸಾರ್ವನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್ ಮಸಾಲ ಉತ್ಪನ್ನಗಳನ್ನು ಜಗಿದು ಉಗಿಯುವುವ ಮೂಲಕ COTPA-2003 ಕಾಯಿದೆ ಉಲ್ಲಂಘಿಸಿದ ವ್ಯಕ್ತಿಗಳ ವಿರುದ್ಧ ಕೇಸ್ ದಾಖಲಿಸಿ ಸುಮಾರು ರೂ. 2100 ದಂಡ ವಿಧಿಸಲಾಯಿತು.

ಸಾರ್ವನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಹಾಗೂ ಪಾನ್ ಮಸಾಲ ಉತ್ಪನ್ನಗಳನ್ನು ಜಗಿದು ಉಗಿಯುವುದರಿಂದ ಕೋವಿಡ್ 19 ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಇತರರಿಗೆ ಹರಡುವ ಸಂಭವ ಹೆಚಾಗ್ಚಿದು, ಆ ಕಾರಣದಿಂದ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆ ತಂಡವು ಆಗಸ್ಟ್ 20 ರಂದು ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳ ಸೇವನೆ ಹಾಗೂ COTPA-2003 ಕಾಯಿದೆ ಉಲ್ಲಂಘನೆ ವಿರುದ್ಧ ಉರ್ವಸ್ಟೋರ್ ಪರಿಸರದಲ್ಲಿ ಕಾರ್ಯಚರಣೆ ನಡೆಸಿ 21 ಕೇಸ್ ದಾಖಲಿಸಿ ಸುಮಾರು ರೂ. 2100 ದಂಡ ವಿಧಿಸಲಾಯಿತು. ಕಾಯಿದೆ ಕುರಿತಂತೆ ಅಂಗಡಿ ಹಾಗೂ ಹೋಟೇಲ್ ಮಾಲೀಕರಿಗೆ ಮಾಹಿತಿ ನೀಡಲಾಯಿತು.

ಈ ತಂಡದಲ್ಲಿ ಹಿರಿಯ ಆಹಾರ ಸುರಕ್ಷತಾಧಿಕಾರಿ ರಾಜು, ಸಮಾಜ ಕಾರ್ಯಕರ್ತರಾದ ಶ್ರುತಿ ಸಾಲ್ಯಾನ್, ವಿಜಯ್ ಕುಮಾರ್, ಉರ್ವ ಸ್ಟೋರ್ ಠಾಣಾ ಪೊಲೀಸ್ ಸಿಬ್ಬಂದಿ ಪ್ರತಾಪ್, ವಿದ್ಯಾ ಮತ್ತಿತರು ಉಪಸ್ಥಿತರಿದ್ದರು.

Comments are closed.