
(ಸಾಂದರ್ಭಿಕ ಚಿತ್ರ)
ಮಂಗಳೂರು, ಆಗಸ್ಟ್.22 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಕೊರೋನಾ ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಟಿದೆ. ಶನಿವಾರ ಮತ್ತೆ 228 ಮಂದಿಯಲ್ಲಿ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10137ಕ್ಕೇ ಏರಿದೆ.
ಶನಿವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಪ್ರಕಟಿಸಿದ ಪ್ರಕಟಣೆಯಲ್ಲಿ ದ.ಕ. ಜಿಲ್ಲೆಯಲ್ಲಿ 228 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಶನಿವಾರ ಸೋಂಕಿತರ ಸಂಖ್ಯೆ10137ಕ್ಕೇ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಏಕಾಏಕಿ ಸೋಂಕು ಹರಡುವ ಸ್ವರೂಪವೇ ಬದಲಾಗಿಬಿಟ್ಟಿದೆ. ಆತಂಕಕಾರಿ ವಿಚಾರವೆಂದರೆ ಸೋಂಕಿನ ಮೂಲವೇ ಪತ್ತೆಯಾಗದವರ ಸಂಖ್ಯೆ ( 90 )ಮತ್ತೆ ಮುಂದುವರಿದಿದೆ.
ಇಂದು ಮಂಗಳೂರಿನಲ್ಲಿ 150, ಬಂಟ್ವಾಳದಲ್ಲಿ 23, ಪುತ್ತೂರಿನಲ್ಲಿ 15, ಸುಳ್ಯದಲ್ಲಿ 8, ಬೆಳ್ತಂಗಡಿಯಲ್ಲಿ 7 ಜನರಿಗೆ ಸೋಂಕು ದೃಢಪಟ್ಟಿದ್ದು ಇದನ್ನು ಹೊರತುಪಡಿಸಿ ಇತರೆ ಜಿಲ್ಲೆಯ 25 ಮಂದಿಗೆ ಪಾಸಿಟಿವ್ ಆಗಿದೆ.
ಶನಿವಾರ 102 ಐಎಲ್ಎ, 13 ಎಸ್ಎಆರ್ಐ ಪ್ರಕರಣಗಳಾಗಿದ್ದು 17 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ಇನ್ನು 90 ಮಂದಿಗೆ ಸೋಂಕು ತಗುಲಿರುವ ಸಂಪರ್ಕದ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ. ಇಬ್ಬರಿಗೆ ಸ್ಥಳೀಯ ಪ್ರಯಾಣದ ಇತಿಹಾಸವಿದ್ದು, ನಾಲ್ವರು ವಿದೇಶದಿಂದ ಬಂದವರಾಗಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇಂದು 320 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 7513 ಕ್ಕೆ ಏರಿಕೆಯಾಗಿದೆ. ಪ್ರಸ್ತುತ 2319 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶನಿವಾರ ನಾಲ್ವರು ಸೋಂಕಿಗೆ ಬಲಿ :
ಇನ್ನು ಜಿಲ್ಲೆಯಲ್ಲಿ ನಾಲ್ವರು ಸೋಂಕಿತರು ಸಾವನ್ನಪ್ಪಿದ್ದು ಈ ಪೈಕಿ ಇಬ್ಬರು ಮಂಗಳೂರಿನವರಾಗಿದ್ದು ಒಬ್ಬರು ಇತರೆ ಜಿಲ್ಲೆಯವರಾಗಿದ್ದಾರೆ. ಒಬ್ಬರು ಬಂಟ್ವಾಳ ತಾಲೂಕಿನವರಾಗಿದ್ದಾರೆ. ಈವರೆಗೆ 305 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಶನಿವಾರವಾರದ ಪ್ರಮುಖ ಅಂಶಗಳು :
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 228 ಮಂದಿಗೆ ಕೊರೋನಾ ಪಾಸಿಟಿವ್
ಜಿಲ್ಲೆಯಲ್ಲಿ ಹತ್ತು ಸಾವಿರ ಗಡಿ ದಾಟಿದ ಕೊರೋನಾ ಪಾಸಿಟಿವ್
ಇಂದು ಮಂಗಳೂರು ತಾಲೂಕಿನ 150, ಬಂಟ್ವಾಳ 23, ಪುತ್ತೂರು 15, ಸುಳ್ಯ 8, ಬೆಳ್ತಂಗಡಿ 7 ಹಾಗೂ ಹೊರ ಜಿಲ್ಲೆಯ 25 ಮಂದಿಗೆ ಕೊರೋನಾ ಪಾಸಿಟಿವ್
ಇಂದು ಜಿಲ್ಲೆಯಲ್ಲಿ ಬರೋಬ್ಬರಿ 320 ಮಂದಿ ಗುಣಮುಖ
ಜಿಲ್ಲೆಯಲ್ಲಿ ಒಟ್ಟು 10,137 ಪಾಸಿಟಿವ್ ಕೇಸ್
ಜಿಲ್ಲೆಯಲ್ಲಿ ಒಟ್ಟು 2,319 ಆಕ್ವೀವ್ ಕೇಸ್
ಜಿಲ್ಲೆಯಲ್ಲಿ ಇಂದು 4 ಮಂದಿ ಕೊರೋನಾ ಮಹಾಮಾರಿಗೆ ಬಲಿ
ಕೊರೋನಾಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 305ಕ್ಕೆ ಏರಿಕೆ.
Comments are closed.