
ಮಂಗಳೂರು ಆಗಸ್ಟ್ 25 : ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿವರ್ಷದಂತೆ 2019ನೇ ವರ್ಷದ ಪುಸ್ತಕ ಬಹುಮಾನ ಯೋಜನೆಗಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ.
ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುತ್ತದೆ. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2019 ಜನವರಿ 1 ರಿಂದ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಯಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2019 ಎಂದು ಮುದ್ರಿತವಾಗಿರಬೇಕು.
ಬಹುಮಾನಕ್ಕಾಗಿ ಪರಿಗಣಿಸಲ್ಪಡುವ ಕೃತಿಗಳು ಇಂತಿವೆ:
ಕಾವ್ಯ (ವಚನಗಳು ಮತ್ತು ಹನಿಗವನಗಳು ಸೇರಿ), ನವಕವಿಗಳ ಪ್ರಥಮ ಕವನ ಸಂಕಲನ (ದೃಢೀಕರಣ ಪತ್ರದೊಂದಿಗೆ), ಕಾವ್ಯ ಹಸ್ತ ಪ್ರತಿ – 30 ವರ್ಷ ಒಳಗಿರುವ ಯುವ ಕವಿಗಳು ತಮ್ಮ ಅಪ್ರಕಟಿತ ಪ್ರಥಮ ಕವನ ಸಂಕಲನದ ಹಸ್ತ ಪ್ರತಿಯನ್ನು ಕಳುಹಿಸಿಕೊಡಬೇಕು.
ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ (ಹರಟೆ ಮತ್ತು ವಿನೋದ ಸಾಹಿತ್ಯ ಸೇರಿ), ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ / ಆತ್ಮಕಥೆ, ಸಾಹಿತ್ಯ ವಿಮರ್ಶೆ (ಸಾಹಿತ್ಯ ಚರಿತ್ರೆ, ಸಾಹಿತ್ಯ ತತ್ವ ಮತ್ತು ಸೌಂದರ್ಯ ಮೀಮಾಂಸೆ ಸೇರಿ), ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ (ಭೌತ, ರಸಾಯನ, ಗಣಿತ, ಪ್ರಾಣಿ, ಸಸ್ಯ, ಇಂಜಿನಿಯರಿಂಗ್, ವ್ಶೆದ್ಯ, ಭೂ ಖಗೋಳ, ಗೃಹ ವಿಜ್ಞಾನ, ಪರಿಸರ) ಮಾನವಿಕ (ಜಾನಪದ, ಇತಿಹಾಸ, ರಾಜಕೀಯ ಶಾಸ್ತ್ರ, ಸಮಾಜ ಶಾಸ್ತ್ರ, ಮಾನವಶಾಸ್ತ್ರ, ಮನಃಶಾಸ್ತ್ರ, ಭಾಷಾ ಶಾಸ್ತ್ರ, ಶಿಕ್ಷಣ, ವಾಣಿಜ್ಯ, ಕಾನೂನು, ಗ್ರಂಥ ಭಂಡಾರ ವಿಜ್ಞಾನ, ಸಮೂಹ ಸಂವಹನ, ಧಾರ್ಮಿಕ, ದಾರ್ಶನಿಕ) ಸಂಶೋಧನೆ (ಕನ್ನಡ ಭಾಷೆ ಸಾಹಿತ್ಯ ಮತ್ತು ಸಂಸ್ಕೃತಗಳಿಗೆ ಸಂಬಂಧಿಸಿದ ಸಂಶೋಧನೆ), ವೈಚಾರಿಕ/ ಅಂಕಣ ಬರಹ, ಅನುವಾದ-1 (ಸೃಜನ/ಸೃಜನೇತರ) ಭಾರತೀಯ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಕೃತಿ. ಅನುವಾದ-2 (ಸೃಜನ / ಸೃಜನೇತರ) ಕನ್ನಡದಿಂದ ಅನ್ಯ ಭಾಷೆಗೆ ಅನುವಾದಗೊಂಡ ಕೃತಿ,
ಲೇಖಕರ ಮೊದಲ ಸ್ವತಂತ್ರ ಕೃತಿಗೆ ಬಹುಮಾನ:
2019 ರಲ್ಲಿ ಪ್ರಕಟವಾದ ಹೊಸ ಬರಹಗಾರರ ಮೊದಲ ಸ್ವತಂತ್ರ ಕೃತಿಯೆಂದು ಖಾತರಿಪಡಿಸುವ ದೃಢೀಕರಣ ಪತ್ರ ಲಗತ್ತಿಸಬೇಕು. ಕನ್ನಡದಿಂದ ಇಂಗ್ಲೀಷ್ ಗೆ ಅನುವಾದ, ದಾಸ ಸಾಹಿತ್ಯಕ್ಕೆ ಸಂಬಂಧಿಸಿದ ಸೃಜನ / ಸೃಜನೇತರ ಕೃತಿಗಳು.
ಬಹುಮಾನಕ್ಕಾಗಿ ಪರಿಗಣಿಸಲ್ಪಡದ ಕೃತಿಗಳು ಇಂತಿವೆ:
ಮರು ಮುದ್ರಣವಾದ ಪುಸ್ತಕಗಳಾಗಿರಬಾರದು, ಪಿ.ಎಚ್.ಡಿ ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳಾಗಿರಬಾರದು, ಪಠ್ಯ ಪುಸ್ತಕಗಳಾಗಿರಬಾರದು, ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಕೃತಿಗಳಾಗಿರಬಾರದು.
ಈಗಾಗಲೇ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳಾಗಿರಬಾದರು, ಒಂದು ಪ್ರಕಾರದಲ್ಲಿ ಒಂದು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳನ್ನು ಮತ್ತದೇ ಪ್ರಕಾರದಲ್ಲಿ ಮುಂದಿನ ಮೂರು ವರ್ಷದವರೆಗೆ ಪರಿಗಣಿಸುವುದಿಲ್ಲ. ಒಬ್ಬ ಲೇಖಕರಿಗೆ ಮೂರು ಬಾರಿ ಬೇರೆ ಬೇರೆ ಪ್ರಕಾರಗಳಲ್ಲಿ ಬಹುಮಾನ ಪಡೆಯುವ ಅವಕಾಶವಿದೆ.
ಮೇಲ್ಕಂಡ ಅವಧಿಯಲ್ಲಿ ಪ್ರಕಟವಾದ ಪುಸ್ತಕಗಳ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೆ ಮಹಡಿ, ಜೆ.ಪಿ. ರಸ್ತೆ, ಬೆಂಗಳೂರು 560002 ಇವರಿಗೆ ರಿಜಿಸ್ಟಡ್ ಅಂಚೆ / ಕೊರಿಯರ್ ಮೂಲಕ ಅಥವಾ ಖುದ್ದಾಗಿ ಸೆಪ್ಟೆಂಬರ್ 30 ರೊಳಗೆ ತಲುಪಿಸಬೇಕು.
ಕಳುಹಿಸಲ್ಪಡುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶಿರ್ಷಿಕೆ ಪುಟದಲ್ಲಿ ಬರೆದಿರಬೇಕು.
ಹೆಚ್ಚಿನ ಮಾಹಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ದೂರವಾಣಿ ಸಂಖ್ಯೆ: 080 22211730, 22106460 ನ್ನು ಸಂಪರ್ಕಿಸುವಂತೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್, ಅವರ ಪ್ರಕಟಣೆ ತಿಳಿಸಿದೆ.
Comments are closed.