ಕರಾವಳಿ

ಪ್ರಧಾನಿ ಮೋದಿಯವರ 70ನೇ ಜನ್ಮದಿನದಂದು ಮಂಗಳೂರಿನ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್‌ನಿಂದ ರಕ್ತದಾನ ಶಿಬಿರ

Pinterest LinkedIn Tumblr

ಮಂಗಳೂರು : ಇದೇ ಸೆಪ್ಟೆಂಬರ್ 17ರಂದು ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿಯವರು ತಮ್ಮ ಬದುಕಿನ 70ನೇ ವಸಂತಕ್ಕೆ ಕಾಲಿರಿಸಲಿದ್ದು, ಅದನ್ನು ಅರ್ಥಪೂರ್ಣ ವಾಗಿ ಆಚರಿಸಲು ಮಂಗಳೂರಿನ ಸಮಾಜಮುಖಿ ಸೇವಾಸಂಸ್ಥೆ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ನಿರ್ಧರಿಸಿದೆ.

ಈಗಾಗಲೇ ಲಾಕ್ ಡೌನ್ ಅವಧಿಯಲ್ಲಿ ಅನೇಕ ಮಾನವೀಯ ಸೇವಾ ಕಾರ್ಯಗಳನ್ನು ಮಾಡಿಕೊಂಡು ಬಂದಿರುವ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ನ ಕಾರ್ಯಕರ್ತರು ಕೊರೊನಾ ಸಾಂಕ್ರಾಮಿಕ ಕಾಯಿಲೆಯ ವಿರುದ್ಧ ನಾವೆಲ್ಲರೂ ಹೋರಾಟ ಮಾಡುತ್ತಿರುವ ಈ ದಿನಗಳಲ್ಲಿ ಆಸ್ಪತ್ರೆಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ರಕ್ತದ ಅವಶ್ಯಕತೆ ಕೂಡ ಕಂಡುಬರುತ್ತಿರುವುದನ್ನು ಮನಗಂಡು ಟ್ರಸ್ಟ್ ನ ಪ್ರಮುಖರು ಮಂಗಳೂರು ಕೊಡಿಯಾಲ್ ಬೈಲ್ ನಲ್ಲಿರುವ ಟಿ.ವಿ.ರಮಣ್ ಪೈ ಸಭಾಂಗಣದ ಆವರಣದಲ್ಲಿ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದಾರೆ.

ಮೋದಿಜಿಯವರ ಜನ್ಮದಿನದಂದೇ ಈ ಶಿಬಿರ ನಡೆಯಲಿದ್ದು ಬೆಳಿಗ್ಗೆ 10 ಗಂಟೆಗೆ ಗಣ್ಯರು ಉದ್ಘಾಟಿಸಲಿದ್ದಾರೆ. ಮೋದಿಜಿಯವರ 70ನೇ ಜನ್ಮದಿನವಾಗಿರುವುದರಿಂದ ಆಂದು ರಕ್ತದಾನ ಮಾಡಲು ಬರುವ ಮೊದಲ 70 ರಕ್ತದಾನಿಗಳಿಗೆ ಮೋದಿಜಿಯವರ ಆಕರ್ಷಕ ಚಿತ್ರವಿರುವ ಉತ್ತಮ ಗುಣಮಟ್ಟದ ಟೀ ಶರ್ಟ್, ಮಾಸ್ಕ್, ರಿಸ್ಟ್ ಬ್ಯಾಂಡ್, ಮಗ್ಗ್ ಮತ್ತು ಕೇಂದ್ರ ಸರಕಾರದ ಆಯುಷ್ ಇಲಾಖೆಯಿಂದ ಪ್ರಮಾಣೀಕೃತ ಒಂದು ತಿಂಗಳಿಗಾಗುವಷ್ಟು ಆಯುಷ್ ಕ್ವಾಥ್ ಚೂರ್ಣವನ್ನು ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಈ ರಕ್ತದಾನ ಶಿಬಿರದಲ್ಲಿ ಸಹೃದಯಿಗಳು ಭಾಗವಹಿಸಿ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ನ ಉತ್ತಮ ಕಾರ್ಯದೊಂದಿಗೆ ಕೈ ಜೋಡಿಸಬೇಕಾಗಿ ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಲಾಗಿದೆ.

Comments are closed.