ಕರ್ನಾಟಕ

ಗೃಹಸಚಿವ ಬಸವರಾಜ ಬೊಮ್ಮಾಯಿ, ಮನೆ ಕೆಲಸದ ಹುಡುಗನಿಗೆ ಕೊರೋನಾ ಸೋಂಕು ದೃಢ

Pinterest LinkedIn Tumblr

ಬೆಂಗಳೂರು: ರಾಜ್ಯದ ಗೃಹಸಚಿವರು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಬಸವರಾಜ್ ಬೊಮ್ಮಾಯಿಯವರಿಗೆ ಕೊರೋನಾ ಸೋಂಕು ದೃಢವಾಗಿದೆ. ಅಲ್ಲದೆ ಅವರ ಮನೆ ಕೆಲಸದ ಹುಡುಗನಿಗೂ ಕೊರೋನಾ ಪಾಸಿಟಿವ್ ಬಂದಿದೆ.

ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಗೃಹಸಚಿವ ಬೊಮ್ಮಾಯಿ, ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದೇನೆ. ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.

ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ.

Comments are closed.