ಕರಾವಳಿ

ಸೆಪ್ಟೆಂಬರ್ ಅಂತ್ಯದವರೆಗೂ ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಬರೋದು ಬೇಡ: ಸಚಿವರ ಆದೇಶ.!

Pinterest LinkedIn Tumblr

ಬೆಂಗಳೂರು: ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಸೆ.21 ತೆರೆಯಲು (ವಿದ್ಯಾರ್ಥಿಗಳು ಸಂದೇಹ ಪರಿಹಾರಕ್ಕೆ ಬರಲು) ಉದ್ದೇಶಿಸಲಾಗಿದ್ದ 9 ರಿಂದ ದ್ವಿತೀಯ ಪಿಯು ತನಕದ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳು ಸೆಪ್ಟೆಂಬರ್ ಅಂತ್ಯದವರೆಗೆ ಮುಂದಿನ ಆದೇಶದ ತನಕ ಸರಕಾರಿ, ಅನುದಾನಿತ, ಅನುದಾನರಹಿತ ಶಾಲಾ ಕಾಲೇಜಿಗೆ ಬರುವುದು ಬೇಡ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಕರ್ನಾಟಕದಲ್ಲಿ ಕೋವಿಡ್19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಇಂತಹ ಸಮಯ ವಿದ್ಯಾರ್ಥಿಗಳು ಶಾಲೆಗೆ ಬರುವುದು ಕ್ಷೇಮಕರವಲ್ಲ ಎಂದು ಅವರು ತಮ್ಮ ಅಧೀಕೃತ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಸೆಪ್ಟೆಂಬರ್ ಅಂತ್ಯದ ಬಳಿಕ ಪರಿಸ್ಥಿತಿ ಅವಲೋಕಿಸಿ‌ ಮುಂದಿನ ‌ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Comments are closed.