ಕರಾವಳಿ

ಕರ್ನಾಟಕ ಬಂದ್ ಹಿನ್ನೆಲೆ ಉಡುಪಿಯಲ್ಲಿ ರಸ್ತೆ ತಡೆಗೆ ಮುಂದಾದ ಪ್ರತಿಭಟನಕಾರರ ಬಂಧನ

Pinterest LinkedIn Tumblr

ಉಡುಪಿ: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಉಡುಪಿ ನಗರದ ಸಿಟಿ ಬಸ್ ನಿಲ್ದಾಣದಸಮೀಪ ರಸ್ತೆ ತಡೆಗೆ ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ಬಂದ್ ಕರೆಕೊಟ್ಟಿದ್ದರೂ ಕೂಡ ಉಡುಪಿಯಲ್ಲಿ ಸಿಟಿ ಮತ್ತು ಸರ್ವೀಸ್ ಬಸ್ಸುಗಳು ಓಡಾಡುತ್ತಿದ್ದು ಬಸ್ ಸಂಚಾರ ನಿಲ್ಲಿಸುವಂತೆ ಪ್ರತಿಭಟನಾಕಾರರು ಮನವಿ ಮಾಡಿದಾಗ ಬಸ್ ಮಾಲಿಕರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಬಸ್ ಸಂಚಾರ ನಡೆಸದಂತೆ ತಡೆಯೊಡ್ಡಿದಾಗ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.

ಸಿಪಿಎಂ ಮುಖಂಡ ಬಾಲಕ್ರಷ್ಣ ಶೆಟ್ಟಿ, ಕರವೇ ಜಿಲ್ಲಾಧ್ಯಕ್ಷ ಅನ್ಸಾರ್ ಅಹ್ಮದ್, ಉಡುಪಿ ನಗರಸಭಾ ಸದಸ್ಯ ರಮೇಶ್ ಕಾಂಚನ್, ದಲಿತ ಸಂಘಟನೆ ಮುಖಂಡ ಸುಂದರ್ ಮಾಸ್ತರ್, ಕಾಂಗ್ರೆಸ್ ಮುಖಂಡ ಪ್ರಖ್ಯಾತ್ ಶೆಟ್ಟಿ ಸೇರಿದಂತೆ ವಿವಿಧ ಸಂಘಟನೆ ಪ್ರಮುಖರನ್ನು ಬಂಧಿಸಲಾಗಿದೆ.

ಇನ್ನು ಬಂದ್ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ ಮಾಡಲಾಗಿದೆ.

Comments are closed.