ಕರಾವಳಿ

ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

Pinterest LinkedIn Tumblr

ಮಂಗಳೂರು ಸೆಪ್ಟೆಂಬರ್ 29 : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಛೇರಿಯಲ್ಲಿ ಭೂಸ್ವಾಧೀನ ಹಾಗೂ ಇತರೆ ಕಾನೂನು ಸಂಬಂಧಿತ ಪ್ರಕರಣಗಳಲ್ಲಿ ಕಾನೂನು ಸಲಹೆ ನೀಡಲು ಕಾನೂನು ಕೋಶ ಸೃಜನೆಯಾಗಿದ್ದು ಈ ಕಾನೂನು ಕೋಶದಲ್ಲಿ ಒಬ್ಬ ನಿವೃತ್ತ ನ್ಯಾಯಾಧೀಶರು ಅಥವಾ ನಿವೃತ್ತ ಹಿರಿಯ ಸಿವಿಲ್ ನ್ಯಾಯಾಧೀಶರು ಅಥವಾ ಕಾನೂನು ಪದವೀಧರರಾಗಿರುವ(ಎಲ್.ಎಲ್.ಬಿ) ಕಂದಾಯ ಇಲಾಖೆಯ ನಿವೃತ್ತ ವಿಶೇ? ಜಿಲ್ಲಾಧಿಕಾರಿ/ನಿವೃತ್ತ ಉಪತಹಶೀಲ್ದಾರ್/ನಿವೃತ್ತ ಸಿವಿಲ್ ನ್ಯಾಯಾಧೀಶರನ್ನು ಕರ್ನಾಟಕ ನಾಗರೀಕ ಸೇವಾ ನಿಯಮಗಳು1958 ರ ನಿಯಮ 313(ಬಿ) ಪ್ರಕಾರ ಮಾಸಿಕ ಸಂಚಿತ ವೇತನ ನಿಗದಿಗೊಳಿಸಿ ನೇಮಕಾತಿಗೊಳಿಸಲು ಆದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಾನೂನು ಸಲಹೆಗಾರರ ತಾತ್ಕಾಲಿಕ ಹುದ್ದೆಗೆ ಅರ್ಜಿ ಸಲ್ಲಿಸಲು 2020 ರ ಅಕ್ಟೋಬರ್ 1 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Comments are closed.