ಬೆಂಗಳೂರು: ಹೊನ್ನಾಳಿ ಶಾಸಕ, ಎಂಪಿ ರೇಣುಕಾಚಾರ್ಯ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಮಂಗಳವಾರದ ಬೆಳಿಗ್ಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ರೇಣುಕಾಚಾರ್ಯ ಬೆಂಗಳೂರು ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಸ್ವತಃ ಶಾಸಕ ರೇಣುಕಾಚಾರ್ಯ ತಮ್ಮ ಫೇಸ್ ಬುಕ್ ಹಾಗೂ ಟ್ವೀಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಬೆಳಗ್ಗೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಹಿನ್ನೆಲೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ 10ನೇ ಬಾರಿಗೆ ಕೋವಿಡ್ ಪರೀಕ್ಷೆಯಲ್ಲಿ ವರದಿ ಪಾಸಿಟಿವ್ ಬಂದಿದೆ
ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲಾರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ
ನಾನು ಆರೋಗ್ಯವಾಗಿದ್ದೆನೆಂದು ಹೇಳಲು ಬಯಸುತ್ತೇನೆ pic.twitter.com/1mPNR3Pc2v
— M P Renukacharya (@MPRBJP) September 29, 2020
ಸಿಎಂ ಬಿ.ಎಸ್.ವೈ ಹೇಳಿದ್ದೇನು..?
ಹೊನ್ನಾಳಿ ಕ್ಷೇತ್ರದ ಜನಪ್ರಿಯ ಶಾಸಕರು, ನನ್ನ ರಾಜಕೀಯ ಕಾರ್ಯದರ್ಶಿಗಳಾದ ಎಂ.ಪಿ.ರೇಣುಕಾಚಾರ್ಯ ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮತ್ತೆ ಎಂದಿನಂತೆ ತಮ್ಮ ಕರ್ತವ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ….ಇದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ.
ನಮ್ಮ ನಾಯಕರು ಜನಪ್ರಿಯ ಮುಖ್ಯಮಂತ್ರಿ @BSYBJP ಅವರು ನನ್ನ ಆರೋಗ್ಯವನ್ನು ವಿಚಾರಿಸಿ ಹರಸಿ ಹಾರೈಸಿದ್ದಕ್ಕೆ ನಾನು ಧನ್ಯೋಸ್ಮಿ.
ನಾಡಿನ ದೊರೆ ನೀವು ನಿಮ್ಮ ಸೇವೆ ರಾಜ್ಯದ ಜನರಿಗೆ ರೈತರ ಕಲ್ಯಾಣಕ್ಕೆ ಸದಾ ಹೀಗೆ ಮುಂದುವರೆಯಲಿ ಎಂದು ಆಶಿಸುತ್ತೇನೆ.
ಧನ್ಯವಾದಗಳು @BSYBJP ಸರ್ https://t.co/zPfpK3ZIvM
— M P Renukacharya (@MPRBJP) September 29, 2020
‘ಇಂದು ಬೆಳಗ್ಗೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ 10ನೇ ಬಾರಿಗೆ ಕೋವಿಡ್ ಪರೀಕ್ಷೆ ಮಾಡಿಸಿದ್ದು, ವರದಿ ಕೊರೊನಾ ಪಾಸಿಟಿವ್ ಬಂದಿದೆ. ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲಾರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ’. ಎಂದು ಅವರು ಹೇಳಿದ್ದಾರೆ.
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರು ಈಗಾಗಾಲೇ ಹತ್ತು ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದು ಇದೀಗ ಪಾಸಿಟಿವ್ ವರದಿ ಬಂದಿದೆ.
Comments are closed.