ಕರಾವಳಿ

ಪ್ಲಾಸ್ಮಾದಿಂದ ಕೂಡ ಕೊರೋನಾ ರೋಗಿಜೀವ ಉಳಿಸಲು ಸಾಧ್ಯ: ಪ್ಲಾಸ್ಮಾ ದಾನ ಮಾಡುವಂತೆ DC ಮನವಿ

Pinterest LinkedIn Tumblr

ಮಂಗಳೂರು ಅಕ್ಟೋಬರ್ 02 : ರಕ್ತದಾನವು ಮತ್ತೊಬ್ಬರ ಜೀವ ಉಳಿಸುವ ಮಹದಾನವಾಗಿದ್ದು. ಪ್ರಸ್ತುತ ಕೋವಿಡ್- 19 ಸಂದರ್ಭದಲ್ಲಿ ರಕ್ತದಾನದ ಜತೆಗೆ ಪ್ಲಾಸ್ಮಾದಾನದಿಂದ ಕೂಡ ರೋಗಿಯ ಜೀವ ಉಳಿಸಲು ಅತ್ಯಗತ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಪ್ಲಾಸ್ಮಾದಾನದ ಕುರಿತು ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಹೇಳಿದ್ದಾರೆ.

ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಶೀಘ್ರದಲ್ಲಿ ಪ್ರಾರಂಭವಾಗಲಿದ್ದು, ಇದಕ್ಕೆ ಬೇಕಾದ ಯಂತ್ರಗಳು ಬಂದಿವೆ. ಸರಕಾರದ ಅನುಮತಿ ಸಿಕ್ಕಿದ ತಕ್ಷಣ ಪ್ಲಾಸ್ಮಾ ಥೆರಪಿ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

ರಕ್ತದಾನ ಮತ್ತು ಪ್ಲಾಸ್ಮಾದಾನ ಮಾಡಲು ಬಯಸುವವರು ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಂಚಾಲಕ ಪ್ರವೀಣ್ ಕುಮಾರ್ ದ. ಸಂ.9916262459 ನ್ನು ಸಂಪರ್ಕಿಸಬಹುದು.

ದಕ್ಷಿಣ ಜಿಲ್ಲಾಡಳಿತ ಹಾಗೂ ರೆಡ್‍ಕ್ರಾಸ್ ಸಂಸ್ಥೆ ಜೊತೆಯಾಗಿ ಪ್ಲಾಸ್ಮಾ ದಾನಿಗಳಿಗೆ ಸೂಕ್ತ ವ್ಯವಸ್ಥೆ ಮಾಡಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Comments are closed.