ಕರಾವಳಿ

ಉಡುಪಿಯಲ್ಲಿ ಮತ್ತೆ ಜೀವ ಪಡೆದು ಮೊಳಗಿದೆ ಸ್ವಾತಂತ್ರ್ಯ ಪೂರ್ವದ ರೇಡಿಯೋ ಟವರ್..!

Pinterest LinkedIn Tumblr

ಉಡುಪಿ: ಇಲ್ಲಿನ ಅಜ್ಜರಕಾಡು ಭುಜಂಗ ಪಾರ್ಕ್ ನಲ್ಲಿದ ಸ್ವಾತಂತ್ರ್ಯ ಪೂರ್ವದ ರೇಡಿಯೋ ಟವರ್ ನ ಪ್ರಸಾರ ಕಾರ್ಯಕ್ಕೆ ಶಾಸಕ ರಘುಪತಿಭಟ್ ಗಾಂಧೀ ಜಯಂತಿಯಂದು ಚಾಲನೆ ನೀಡಿದರು.

1938 ರಲ್ಲಿ ನಿರ್ಮಾಣಗೊಂಡಿರುವ ಈ ಟವರ್ ಕೆಲವು ವರ್ಷಗಳಿಂದ ಕಾರ್ಯನಿರ್ವಹಣೆ ಸ್ಥಗಿತಗೊಳಿಸಿದ್ದು, ಕಳೆದ ಬಾರಿಯ ಗಾಂಧೀ ಜಯಂತಿ ಕಾರ್ಯಕ್ರಮದಂದು ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ ಇದನ್ನು ದುರಸ್ತಿಗೊಳಿಸಿ, ಸಾರ್ವಜನಿಕ ಬಳಕೆಗೆ ಅನುವು ಮಾಡಲು ಸೂಚಿಸಿದ್ದರು.

ಪ್ರಸ್ತುತ ದುರಸ್ತಿಗೊಂಡಿರುವ ಈ ಟವರ್ ಮೂಲಕ , ಪಾರ್ಕ್ ಗೆ ಆಗಮಿಸುವ ಸಾರ್ವಜನಿಕರು, ಟವರ್ ನ ಕೆಳಗಡೆ ಇರುವ ಕಲ್ಲುಬಂಡೆ ಹಾಗೂ ಸುತ್ತಲಿನ ಪ್ರದೇಶದಲ್ಲಿ ಕುಳಿತು ಪ್ರತಿದಿನ ಸಂಜೆ 5.30 ರಿಂದ 8 ಗಂಟೆಯವರೆಗೆ ರೇಡಿಯೋ ಕಾರ್ಯಕ್ರಮಗಳನ್ನು ಆಲಿಸಬಹುದಾಗಿದೆ. ಟವರ್ ನ ಹಳೆಯ ಮೂಲ ಸ್ವರೂಪದಲ್ಲಿ ಏನೂ ಬದಲಾವಣೆ ಮಾಡದೆ, ಹೊಸ ಮೈಕ್ ಗಳು ಮತ್ತು ರೇಡಿಯೋ ಅಳವಡಿಸಿದ್ದು, ಕೇಳುಗರಿಗೆ ಹೊಸ ಅನುಭವ ನೀಡಲಿರುವ ಈ ಟವರ್ , ಹೆಚ್ಚು ಕರ್ಕಶವಿಲ್ಲದೇ ಪಾರ್ಕ್ ನೊಳಗಿನ ಕೇಳುಗರಿಗೆ ಮಾತ್ರ ಮಾರ್ಧನಿಸಲಿದೆ. ಅಲ್ಲದೇ ಈ ಹಿಂದಿನಂತೆ ಬೆಳಗ್ಗೆ 8,ಮಧ್ಯಾಹ್ನ 12.30 ಮತ್ತು ರಾತ್ರಿ 8 ಗಂಟೆಗೆ ಒಮ್ಮೆ ಟವರ್ ಮೂಲಕ ಅಲಾರಂ ಮೊಳಗಲಿದೆ.

Comments are closed.