ಕರಾವಳಿ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಜನ್ಮದಿನದಂದು ಅಭಿಮಾನಿಗಳಿಗೆ ನೋವಿನಿಂದ ಬರೆದ ಮನವಿ ಪತ್ರದಲ್ಲೇನಿದೆ?

Pinterest LinkedIn Tumblr

ಬೆಂಗಳೂರು : ಸ್ಯಾಂಡಲ್ ವುಡ್ ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಆಕ್ಟೋಬರ್ 6ರಂದು ಹುಟ್ಟುಹಬ್ಬದ ಸಂಭ್ರಮ. ಆದರೆ ಅಣ್ಣನನ್ನು ಕಳೆದುಕೊಂಡಿರುವ ದುಃಖದಲ್ಲಿರುವ ಅವರು ಈ ಬಾರಿ ಜನ್ಮದಿನ ಆಚರಣೆ ಮಾಡಿಕೊಳ್ಳಲ್ಲ, ಮನೆಯ ಬಳಿ ಬರಬೇಡಿ, ಇದ್ದಲ್ಲೇ ಶುಭಹಾರೈಸಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಅಣ್ಣನ ನೆನಪಿನಲ್ಲೇ ಕಾಲಕಳೆಯುತ್ತಿರುವ ಧ್ರುವ ಸಂಭ್ರಮ, ಅದ್ದೂರಿತನದ ಹುಟ್ಟುಹಬ್ಬ ಬೇಡ ಎಂದಿದ್ದಾರೆ. ಅಲ್ಲದೆ ಕೊರೊನಾ ವೈರಲ್ ಹಾವಳಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ಹಾಗಿಲ್ಲ. ಹಾಗಾಗಿ ಅಭಿಮಾನಿಗಳಿಗೆ ಮನೆಯ ಬಳಿ ಬರಬೇಡಿ ಎಂದು ಕೇಳಿಕೊಂಡಿದ್ದಾರೆ.

ಪ್ರತೀ ವರ್ಷ ಅದ್ದೂರಿಯಾಗಿ, ಅಭಿಮಾನಿಗಳ ಮಧ್ಯೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಸ್ಯಾಂಡಲ್ ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಜನ್ಮದಿನವಾದ ಮಂಗಳವಾರ (ಅಕ್ಟೋಬರ್ 6) “ಪೊಗರು” ಚಿತ್ರದ ಶೂಟಿಂಗ್ ಸೆಟ್ ನಲ್ಲಿ ತನ್ನ ವಿಶೇಷ ದಿನವನ್ನು ಕಳೆದಿದ್ದಾರೆ.

ಸರಿಯಾಗಿ ಎಂಟು ವರ್ಷಗಳ ಹಿಂದೆ ಸ್ಯಾಂಡಲ್‌ವುಡ್‌ಗೆ ಗ್ರ್ಯಾಂಡ್ ಎಂಟ್ರಿ ನೀಡಿದವರು ನಟ ಧ್ರುವ ಸರ್ಜಾ. ಅಭಿಮಾನಿಗಳಿಂದ ‘ಆ್ಯಕ್ಷನ್‌ ಪ್ರಿನ್ಸ್’ ಎಂದು ಕರೆಸಿಕೊಂಡ ಧ್ರುವಗೆ ಮೊದಲ ಚಿತ್ರ ‘ಅದ್ದೂರಿ’ ದೊಡ್ಡ ಯಶಸ್ಸು ತಂದುಕೊಟ್ಟಿತು. ಆನಂತರ ಸಿನಿಮಾಗಳ ಆಯ್ಕಯಲ್ಲಿ ಸಿಕ್ಕಾಪಟ್ಟೆ ಚ್ಯೂಸಿಯಾದ ಧ್ರುವ, ಎಂಟು ವರ್ಷಗಳಲ್ಲಿ ಮಾಡಿರುವುದು ನಾಲ್ಕು ಸಿನಿಮಾ ಮಾತ್ರ.

ಹುಟ್ಟುಹಬ್ಬದ ಸಂಭ್ರಮವಿಲ್ಲದಿದ್ದರೂ ಅಭಿಮಾನಿಗಳಿಗೆ ಧ್ರುವ ಕಡೆಯಿಂದ ಭರ್ಜರಿ ಗಿಷ್ಟ್ ಸಿಕ್ಕಿದೆ. ಅದ್ದೂರಿ’ ನಿರ್ದಶಕರ ಜೊತೆ ಧ್ರುವ ಸರ್ಜಾ ಹೊಸ ಸಿನಿಮಾ ಅನೌನ್ಸ್ ಆಗಿದೆ. ಅಳೆದು ತೂಗಿ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುವ ಧ್ರುವ ಹುಟ್ಟುಹಬ್ಬದ ವಿಶೇಷವಾಗಿ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ವಿಶೇಷ ಅಂದರೆ ನಿರ್ದೇಶಕ ಎ.ಪಿ ಅರ್ಜುನ್ ಜೊತೆ ಮತ್ತೆ ಸಿನಿಮಾ ಮಾಡಲು ಧ್ರುವ ಮುಂದಾಗಿದ್ದಾರೆ. ಈ ಸಿನಿಮಾದ ಪೋಸ್ಟರ್ ಕೂಡ ನಿನ್ನೆ ರಿಲೀಸ್ ಆಗಿದೆ.

”ಅಭಿಮಾನಿಗಳೇ ನಮ್ಮ ಅನ್ನದಾತರು :

“ನಾನು ಈ ವರ್ಷ ತಮ್ಮ ಜನ್ಮದಿನವನ್ನು ಆಚರಿಸಲು ಬಯಸುವುದಿಲ್ಲ” ಅಲ್ಲದೆ ಅಭಿಮಾನಿಗಳು ತಮ್ಮ ಮನೆಯ ಮುಂದೆ ಸೇರದಂತೆಯೂ ಮನವಿ ಮಾಡಿದ್ದಾರೆ. ಬದಲಾಗಿ, ಅವರು ಎಲ್ಲಿದ್ದರೋ ಅಲ್ಲಿಂದಲೇ ಹಾರೈಸಿರೆಂದು ನಟ ಧ್ರುವ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

”ಅಭಿಮಾನಿಗಳೇ ನಮ್ಮ ಅನ್ನದಾತರು. ನೀವೇ ನಮ್ಮ ಶಕ್ತಿ. ಪ್ರತಿವರ್ಷ ಹುಟ್ಟುಹಬ್ಬಕ್ಕೆ ನೀವು ನಮ್ಮ ಮನೆಗೆ ಬಂದು ತೋರಿಸೋ ಪ್ರೀತಿ, ಅಭಿಮಾನ ವರ್ಣನಾತೀತ. ಈ ವರ್ಷದ ಎಲ್ಲಾ ಬೆಳವಣಿಗೆಗಳು ನಿಮಗೆ ಗೊತ್ತಿರೋದೇ. ಎಲ್ಲೂ ಸಂಭ್ರಮವಿಲ್ಲ. ಅಭಿಮಾನಿಗಳನ್ನು ಮನೆಯ ಬಳಿ ಬರಬೇಡಿ ಎನ್ನಲು ಮನಸ್ಸಿಲ್ಲ. ನೀವು ಇರುವ ಕಡೆಯಿಂದಲೇ ಹಾರೈಸಿ. ಅದೇ ನನಗೆ ಶ್ರೀರಕ್ಷೆ. ಜೈಆಂಜನೇಯ” ಎಂದು ಧ್ರುವ ಸರ್ಜಾ ಧ್ರುವ ಸಾಮಾಜಿಕ ಜಾಲತಾಣದಲ್ಲಿ ವಿನಂತಿಸಿಕೊಂಡಿದ್ದಾರೆ.

Comments are closed.