ಕರಾವಳಿ

ಆಟೋದಲ್ಲಿ ಬಿಟ್ಟು ಹೋದ ಹಣವನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಉಡುಪಿಯ ರಿಕ್ಷಾ ಚಾಲಕ..!

Pinterest LinkedIn Tumblr

ಉಡುಪಿ: ಆಟೋರಿಕ್ಷಾದಲ್ಲಿ ಬಿಟ್ಟು ಹೋಗಿದ್ದ ಕುರ್ಕಾಲಿನ ಮಹಿಳೆಯ 50 ಸಾವಿರ ಹಣವನ್ನು ಮರಳಿಸಿ ಆಟೋ ರಿಕ್ಷಾ ಚಾಲಕರೋರ್ವರು ಮಾನವೀಯತೆ ಮೆರೆದ ಘಟನೆ ಕಟಪಾಡಿಯಲ್ಲಿ ನಡೆದಿದೆ.

ಆಟೋರಿಕ್ಷಾ ಚಾಲಕ ಅಂಬಲಪಾಡಿ ಜಯ ಶೆಟ್ಟಿ ಬುಧವಾರ ಬೆಳಗ್ಗೆ ಕುರ್ಕಾಲಿನಿಂದ ಮಹಿಳೆಯೊಬ್ಬರು ಆಟೋರಿಕ್ಷಾದಲ್ಲಿ ಕಟಪಾಡಿ ಪೇಟೆಗೆ ಬಂದಿದ್ದರು. ಆಟೋ ಇಳಿಯುವ ಗಡಿಬಿಡಿಯಲ್ಲಿ 50 ಸಾವಿರ ರೂಪಾಯಿ ಹಣವನ್ನು ಮರೆತು ರಿಕ್ಷಾದಲ್ಲೇ ಬಿಟ್ಟು ಹೋಗಿದ್ದರು. ಮಹಿಳೆಯನ್ನು ಬಸ್‍ಸ್ಟ್ಯಾಂಡಿನಲ್ಲಿ ಬಿಟ್ಟು ಉಡುಪಿಯ ಕಾರ್ತಿಕ್ ಎಸ್ಟೇಟ್ ಸಮೀಪದ ಆಟೋ ಸ್ಟ್ಯಾಂಡಿಗೆ ಮರಳಿದ್ದ ರಿಕ್ಷಾ ಚಾಲಕ ಜಯ ಶೆಟ್ಟಿ ಎಂಬವರು ಸೀಟ್‍ನಲ್ಲಿ ಪ್ಲಾಸ್ಟಿಕ್ ಲಕೋಟೆ ಇರುವುದನ್ನು ಗಮನಿಸಿದ್ದಾರೆ. ತೆರೆದಾಗ ಅದರಲ್ಲಿ 50ಸಾವಿರ ಹಣವಿತ್ತು. ಆ ಕೂಡಲೇ ಉಡುಪಿಯಿಂದ ಕಟಪಾಡಿಗೆ ಬಂದು ಕುರ್ಕಾಲಿನ ಮಹಿಳೆಯನ್ನು ಪತ್ತೆ ಮಾಡಿ 50 ಸಾವಿರ ರೂಪಾಯಿ ಹಣವನ್ನು ಮರಳಿಸಿದ್ದಾರೆ.

ಆಟೋ ರಿಕ್ಷಾ ಚಾಲಕನ ಮಾನವೀಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

 

Comments are closed.