ಕರಾವಳಿ

ಸ್ಮಾರ್ಟ್ ಸಿಟಿ ಯೋಜನೆ ಅಧಿಕಾರಿಗಳಿಂದ ಜಾಗ ಅತಿಕ್ರಮಣ ; ಸರಕಾರಿ ನೌಕರರ ಸಂಘದಿಂದ ತೀವ್ರ ಆಕ್ರೋಷ

Pinterest LinkedIn Tumblr

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ಸ್ವಂತ ಸ್ಥಳದ ಖಾಲಿ ಜಾಗದಲ್ಲಿ ಸರಕಾರಿ ನೌಕರರ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಕಂಪ್ಯೂಟರ್ ತರಬೇತಿ ನಡೆಸಲು ಸಂಘದಿಂದ ಕಟ್ಟಡ ನಿರ್ಮಿಸಲು ಯೋಚಿಸಿದ್ದ ಸ್ಥಳದಲ್ಲಿಇದೀಗ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯವರು ಅನಧಿಕೃತವಾಗಿ ಈ ಜಾಗವನ್ನುಅತಿಕ್ರಮಣ ಮಾಡಿ ಹೊಸ ಕಟ್ಟಡ ಕಟ್ಟಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಹಾಗೂ ಇದನ್ನು ಖಂಡಿಸಿ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸರಕಾರಿ ನೌಕರರು ಪ್ರತಿಭಟನೆ ನಡೆಸಿ ಆಕ್ರೋಷ ವ್ಯಕ್ತಪಡಿಸಿದರು.

ಈ ಬಗ್ಗೆ ಈಗಾಗಲೇ ಪಾಂಡೇಶ್ವರ ದಕ್ಷಿಣ ಪೊಲೀಸ್‍ಠಾಣೆಗೆ ಲಿಖಿತವಾಗಿ ದೂರು ನೀಡಲಾಗಿದೆ. ತನಿಖೆ ಪ್ರಗತಿಯಲ್ಲಿದ್ದರೂ ಸ್ಮಾರ್ಟ್ ಸಿಟಿಯವರು ಮತ್ತೊಮ್ಮೆ ಅನಧಿಕೃತ ಪ್ರವೇಶ ಮಾಡಿ ಹೊಸ ಕಟ್ಟಡ ನಿರ್ಮಿಸಲು ಕಾಮಗಾರಿಯನ್ನುಆರಂಭಿಸಲು ಪ್ರಯತ್ನಿಸಿದ್ದಾರೆ. ಈ ಬಗ್ಗೆ ಠಾಣಾಧಿಕಾರಿಯವರು ಕ್ರಮಕೈಗೊಂಡು ಕಾಮಗಾರಿಯನ್ನು ತಡೆಹಿಡಿಯ ಬೇಕೆಂದು ಪ್ರತಿಭಟನಕಾರರು ಆಗ್ರಹಿಸಿದ್ದಾರೆ.

ಸ್ಮಾರ್ಟ್ ಸಿಟಿಯ ಈ ಅತಿಕ್ರಮ ಧೋರಣೆಯನ್ನು ಜಿಲ್ಲಾಸರಕಾರಿ ನೌಕರರ ಸಂಘವು ಬಲವಾಗಿ ವಿರೋಧಿಸುತ್ತದೆ ಎಂದು ಪ್ರತಿಭಟನಾ ಸಭೆಯಲ್ಲಿ ತಿಳಿಸಲಾಯಿತು.

ಬಳಿಕ ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು, ತಹಶೀಲ್ದಾರ್ ಮತ್ತು ಮಾನ್ಯ ಶಾಸಕರಿಗೆ ಮನವಿಯನ್ನು ಸಲ್ಲಿಸಲಾಯಿತು.

ಪ್ರತಿಭಟನಾ ಸಭೆಯಲ್ಲಿ ದ.ಕ.ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷರು,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಖಜಾಂಚಿ, ಉಪಾಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿಸಮಿತಿ ಸದಸ್ಯರು ಹಾಗೂ ಸರಕಾರಿ ನೌಕರರು ಉಪಸ್ಥಿತರಿದ್ದರು.

Comments are closed.