ಮಂಗಳೂರು ಅಕ್ಟೋಬರ್ 17: ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ನಾಡಹಬ್ಬ ದಸರಾ ವನ್ನು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಸರಳ ರೀತಿಯಲ್ಲಿಆಚರಿಸಲಾಗುತ್ತದೆ. ಈ ಹಿನ್ನೆಲೆ ಯಲ್ಲಿ ವಿಪತ್ತು ನಿರ್ವಹಣಾಕಾಯ್ದೆ 2005 ರ ಕಲಂ26(1)(2)(3) ರಡಿಯಲ್ಲಿ ಪ್ರದತ್ತವಾದಅಧಿಕಾರವನ್ನು ಚಲಾಯಿಸಿ ದ.ಕಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಅಧ್ಯಕ್ಷನಾಗಿ ಮತ್ತುಕರ್ನಾಟಕ ಸಾಂಕ್ರಾಮಿಕ ರೋಗಗಳ ಆಧ್ಯಾದೇಶ 2020 ಕಲಂ 4 ರಲ್ಲಿ ಪ್ರದತ್ತವಾದಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಡಾ: ರಾಜೇಂದ್ರ ಕೆ.ವಿ ಈ ಕೆಳಕಂಡಂತೆ ಆದೇಶಿಸಿರುತ್ತಾರೆ.
ಕೋವಿಡ್-19 ವೈರಾಣು ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಪ್ರಸಕ್ತ ವರ್ಷಅಕ್ಟೋಬರ್ 17 ರಿಂದ 26 ರವರೆಗೆಜಿಲ್ಲೆಯಾದ್ಯಂತದಸರಾವನ್ನುಆಚರಿಸಲು ಸಾರ್ವಜನಿಕರುಅತ್ಯಂತ ಸರಳವಾಗಿ ಕಾರ್ಯಕ್ರಮಗಳಲ್ಲಿ 100ಕ್ಕಿಂತ ಹೆಚ್ಚು ಜನರುಒಂದೆಡೆ ಸೇರದಂತೆ ಸಾಮಾಜಿಕಅಂತರವನ್ನುಕಡ್ಡಾಯವಾಗಿ ಪಾಲಿಸಬೇಕು.
ಸಾಮಾಜಿಕಅಂತರವಿಲ್ಲದೆ ನಡೆಸಲಾಗುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಕಾರ್ಯಕ್ರಮದ ಆಯೋಜಕರು, ದೇವಸ್ಥಾನದ ಆಡಳಿತಾಧಿಕಾರಿಗಳು ಮುಂಚಿತವಾಗಿ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ ಅನುಮತಿಯನ್ನು ಪಡೆಯಬೇಕು ಹಾಗೂ ಕಾರ್ಯಕ್ರಮ ನಡೆಯುವಲ್ಲಿ ಸ್ಯಾನಿಟೈಸರ್ ಮಾಸ್ಕ್ ಬಳಕೆ, ಸಾಮಾಜಿಕಅಂತರ ಪಾಲನೆಗೆ ಕ್ರಮಕೈಗೊಳ್ಳಬೇಕು.ಕೋವಿಡ್-19 ಮಾರ್ಗಸೂಚಿಗಳು ಉಲ್ಲಂಘನೆ ಯಾದಲ್ಲಿಕಾರ್ಯಕ್ರಮದಆಯೋಜಕರು, ದೇವಸ್ಥಾನದ ಆಡಳಿತಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ.
ಸಾರ್ವಜನಿಕರಆರೋಗ್ಯದದೃಷ್ಠಿಯಿಂದಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರಪಾಲಿಕೆ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆ, ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾಆದೇಶ, ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹಬ್ಬ ಹರಿದಿನಗಳಲ್ಲಿ ಸಮಾಜದ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಉಂಟಾಗಲು ಪೂರಕವಾಗಿರುವುದರಿಂದದಸರಾ ಹಬ್ಬವನ್ನುಅದೇರೀತಿಯಿಂದಲೇಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗಬಾರದಂತೆಕಾಪಾಡಬೇಕು.
ದಸರಾತಯಾರಿ ಮತ್ತು ಚಟುವಟಿಕೆಗಳ ಕುರಿತು ಸಂಬಂಧಿಸಿದ ಪ್ರಾಧಿಕಾರಿಗಳು ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಈ ಮಾರ್ಗಸೂಚಿಗಳು ನವರಾತ್ರಿ ಹಾಗೂ ದುರ್ಗಾ ಪೂಜೆಯಆಚರಣೆಗೂಅನ್ವಯವಾಗುತ್ತದೆ.
ದಸರಾ ಹಬ್ಬದ ಸಂದರ್ಭದಲ್ಲಿದೇವಸ್ಥಾನದ ಆವರಣದೊಳಗೆ ಮಾತ್ರಗರಿಷ್ಠ 10 ಹುಲಿ ವೇಷಾಧಾರಿಗಳಿಗೆ ನಿಗದಿತ ಕಾಲಮಿತಿಯೊಳಗೆ ಹರಕೆಅರ್ಪಿಸಲುಅನುಮತಿ ನೀಡಲಾಗಿದೆ. ಹುಲಿ ವೇಷಧಾರಿಗಳು ದೇವಸ್ಥಾನದ ಹೊರಗೆ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರದರ್ಶನ ನೀಡುವುದನ್ನುಕಡ್ಡಾಯವಾಗಿ ನಿರ್ಬಂಧಿಸಲಾಗಿದೆ.
ಮುಖಗವಸು ಧರಿಸದೆ ಸೇರತಕ್ಕಂತಹ ಸಾರ್ವಜನಿಕರ ವಿರುದ್ಧ ನಿಯಮಾನುಸಾರದಂಡ ವಿಧಿಸಲುಕ್ರಮ ಕೈಗೊಳ್ಳಲಾಗುತ್ತದೆ.ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದಆದೇಶ, ಮಾರ್ಗಸೂಚಿ ಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾಕಾಯ್ದೆ, 2005 ಹಾಗೂ ಭಾರತದಂಡ ಸಂಹಿತೆಯ 188ನೇ ಪ್ರಕರಣದಅಡಿಯಲ್ಲಿ ಮತ್ತುಅನ್ವಯವಾಗಬಹುದಾದಇತರೆ ಕಾನೂನು ಉಪಬಂಧಗಳ ಮೇರೆಗೆಕ್ರಮಜರುಗಿಸಲಾಗುತ್ತದೆ.
ಈ ಎಲ್ಲಾ ನಿರ್ದೇಶನಗಳನ್ನು ಪಾಲಿಸದೆ ವ್ಯತಿರಿಕ್ತವಾಗಿ ವರ್ತಿಸಿದ್ದಲ್ಲಿ ಅಂತವರ ವಿರುದ್ಧ ಕಾನೂನು ರೀತ್ಯಾಕ್ರಮಜರಗಿಸಲು ಆದೇಶಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.