ಕರಾವಳಿ

ಮಂಗಳೂರಿನ ಬೊಂದೆಲ್‌ನಲ್ಲಿ ಶೀಘ್ರದಲ್ಲಿ ಸುಸಜ್ಜಿತ ರಂಗ ಮಂದಿರ ನಿರ್ಮಾಣ

Pinterest LinkedIn Tumblr

ಮಂಗಳೂರು ಅಕ್ಟೋಬರ್ 22 : ಬೊಂದೆಲ್ ನಲ್ಲಿ ಪ್ರಾಸ್ತಾವಿಕ ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಕಲಾವಿದರ ಸಮಲೋಚನೆ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜರಗಿತು.

ಕಲಾವಿದರ ಜೊತೆ ಜಿಲ್ಲಾಧಿಕಾರಿಯವರೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆಯನ್ನು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ವಹಿಸಿದ್ದರು.

ಈ ವೇಳೆ ಮಾತನಾಡಿದ ಡಾ. ವೈ ಶಾಸಕ ಭರತ್ ಶೆಟ್ಟಿ ಅವರು, ಕಲಾವಿದರ ಸೂಚನೆ ಸಹಕಾರದೊಂದಿಗೆ ಸುಸಜ್ಜಿತ ರಂಗ ಮಂದಿರ ನಿರ್ಮಾಣವಾಗಲಿದ್ದು, ಆದಷ್ಟು ಬೇಗ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದರು. ಈ ಸಂಬಂಧ ಸಂಪೂರ್ಣ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಅಂತಿಮ ಬಜೆಟ್ ಅನ್ನು ತಯಾರಿಸಲು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ವೀಡಿಯೋ ಕಾನ್ಫರೆನ್ಸ್ ಮೂಲಕ ಕಲಾವಿದರೊಂದಿಗೆ ನೇರ ಮಾತುಕತೆ ಯನ್ನಾಡಿ ಮಾಹಿತಿ ಸಂಗ್ರಹಿಸಿದರು. ಆರ್ಕಿಟೆಕ್ಸ್ ಕುಮಾರ್ ಚಂದ್ರ ಪಿ.ಪಿ.ಟಿ. ಮೂಲಕ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕರ ಜೊತೆಗೆ ಸ್ಥಳೀಯ ಭಾಗದ ಕಾರ್ಪೊರೇಟರ್ ಲೋಹಿತ್ ಅಮೀನ್, ಮೂಡ ಆಯುಕ್ತ ದಿನೇಶ್ ಕುಮಾರ್, ಜಿಲ್ಲಾ ನಗರ ಅಭಿವೃದ್ಧಿ ಕೋಶ, ನಿರ್ದೇಶಕಿ ಗಾಯತ್ರಿ ನಾಯಕ್, ಕರ್ನಾಟಕ ಗೃಹ ಮಂಡಳಿಯ ಇಂಜಿನಿಯರ್ ಪ್ರದೀಪ್, ಸನಾತನ ನಾಟ್ಯಾಲಯದ ಚಂದ್ರಶೇಖರ ಶೆಟ್ಟಿ, ಮಂಗಳೂರು ರಂಗಭೂಮಿಯ ಗೌರವಾಧ್ಯಕ್ಷ ರಾಮಚಂದ್ರ ಬೈಕಂಪಾಡಿ,ರಂಗಸಂಗಾಂತಿ ಸಂಸ್ಥೆಯ ಅಧ್ಯಕ್ಷರಾದ ಶಶಿರಾಜ್ ಕಾವೂರು, ಸಂಕೇತ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜಗನ್ ಪವಾರ್, ಸ್ವರೂಪ ಸಮೂಹ ಸಂಸ್ಥೆಯ ಗೋಪಾಡ್ಕರ್, ಹಿರಿಯ ಚಿತ್ರಕಲಾವಿದ ಪ್ರಸಾದ್ ಆರ್ಟ್ಸ್ ಗ್ಯಾಲರಿಯ ಗಣೇಶ ಸೋಮಯಾಜಿ,ಯಕ್ಷಧ್ರುವ ಮಂಗಳೂರು ಅಧ್ಯಕ್ಷ ಪ್ರದೀಪ್ ಆಳ್ವ, ತುಳುನಾಟಕ ಕಲಾವಿದ ಮೋಹನ್ ಕೊಪ್ಪಳ ಉಪಸ್ಥಿತರಿದ್ದರು.

ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶ ರಾಜೇಶ್ ರವರು ಸ್ವಾಗತಿಸಿ, ಧನ್ಯವಾದವಿತ್ತರು.

Comments are closed.