ಕರಾವಳಿ

ಉಳ್ಳಾಲ ಸಮೀಪದ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಭೀಕರ ರಸ್ತೆ ಅಪಘಾತ : ನವದಂಪತಿ ಬಲಿ

Pinterest LinkedIn Tumblr

ಮಂಗಳೂರು, ಅಕ್ಟೋಬರ್.27 : ಉಳ್ಳಾಲ ಸಮೀಪದ ತೊಕ್ಕೊಟ್ಟು ಮೇಲ್ಸೇತುವೆ ಮೇಲೆ ಇಂದು ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ದುರಂತ ಸಾವು ಕಂಡಿದ್ದಾರೆ.

ತೊಕ್ಕೊಟ್ಟು ಓವರ್ ಬ್ರಿಡ್ಜ್ ಕೊನೆಯ ಉಳ್ಳಾಲ ತಿರುವಿನಲ್ಲಿ ಕಂಟೈನರ್ ಲಾರಿಯೊಂದು ಬೈಕ್ ಮೇಲೆ ಹರಿದು ಹೋದ ಪರಿಣಾಮ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಸಾವನ್ನಪ್ಪಿದ್ದಾರೆ.

ಮೃತರನ್ನು ನವವಿವಾಹಿತರಾದ ಉಳ್ಳಾಲ ಬೈಲಿನ ನಿವಾಸಿಗಳಾದ ರಾಯನ್ ಫೆರ್ನಾಂಡಿಸ್ (37) ಮತ್ತು ಅವರ ಪತ್ನಿ ಪ್ರಿಯಾ ಫೆರ್ನಾಂಡಿಸ್ (32) ಎಂದು ಹೆಸರಿಸಲಾಗಿದೆ.

ಮೂಲತ: ಬಜಾಲ್ ನಿವಾಸಿಗಳಾದ ಅವರು ಉಳ್ಳಾಲ ಬಂಗೇರಲೇನ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದರು ಎಂದು ಹೇಳಲಾಗಿದೆ.

ಪ್ರಿಯಾ ಫೆರ್ನಾಂಡಿಸ್ ಅವರು ಮಂಗಳೂರಿನ ಫಾದರ್ ಮುಲ್ಲರ್ ನಲ್ಲಿ ಉದ್ಯೋಗದಲ್ಲಿದ್ದು ಅವರನ್ನು ಅವರ ಪತಿ ಪಿಕ್ ಮಾಡಿ ಮನೆಗೆ ಬರುವಾಗ ಮೇಲ್ಸೇತುವೆ ಕೊನೆಯಲ್ಲಿ ಬೈಕ್ ಉಳ್ಳಾಲಕ್ಕೆ ತಿರುವು ಪಡೆಯುವಾಗ ಕಂಟೇನರ್ ಲಾರಿ ಇವರ ಮೇಲಿನಿಂದ ಹರಿದಿದೆ ಎನ್ನಲಾಗಿದೆ.

ಈ ವೇಳೆ ಪ್ರಿಯಾ ಫೆರ್ನಾಂಡಿಸ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಚಲಾಯಿಸುತ್ತಿದ್ದಅಕೆಯ ಪತಿ ಗಂಭೀರ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.