ಕರಾವಳಿ

ದುಷ್ಕರ್ಮಿಗಳಿಂದ ತಲವಾರು ದಾಳಿ: ಬಿಜೆಪಿ ಕಾರ್ಯಕರ್ತ ,ಸ್ಟುಡಿಯೋ ಮಾಲಕನ ಹತ್ಯೆಗೆ ಯತ್ನ

Pinterest LinkedIn Tumblr

ಮಂಗಳೂರು/ ಬಂಟ್ವಾಳ, ಅಕ್ಟೋಬರ್.28: ಬಿಜೆಪಿ ಕಾರ್ಯಕರ್ತ ಹಾಗೂ ಫೊಟೋಗ್ರಾಫರ್ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಇಂದು ರಾತ್ರಿ ಫರಂಗಿಪೇಟೆಯಲ್ಲಿ ನಡೆದಿದೆ.

ಫರಂಗಿಪೇಟೆಯಲ್ಲಿರುವ ತೃಶಾ ಸ್ಟುಡಿಯೋ ಮಾಲಕ ದಿನೇಶ್ ಕೊಟ್ಟಿಂಜ ಎಂಬವರ ಮೇಲೆ ಅಪರಿಚಿತ ದುಷ್ಕರ್ಮಿಗಳು ತಲವಾರು ದಾಳಿ ನಡೆಸಿ ಪರಾರಿಯಾಗಿದ್ದಾರೆ. ದಿನೇಶ್ ಶೆಟ್ಟಿಯವರು ಫರಂಗಿಪೇಟೆಯ ಪೂಂಜಾ ಕಾಂಪ್ಲೆಕ್ಸ್ ನಲ್ಲಿರುವ ತೃಷಾ ಸ್ಟುಡಿಯೋ ಮಾಲಕರಾಗಿದ್ದರು. ಅಲ್ಲದೆ ಬಿಜೆಪಿ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು.

ಬುಧವಾರ ರಾತ್ರಿ ಫರಂಗಿಪೇಟೆಯಲ್ಲಿರುವ ಅವರ ಸ್ಟುಡಿಯೋ ಒಳಗೆ ನುಗ್ಗಿ ದುಷ್ಕರ್ಮಿಗಳ ತಂಡ ಈ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ದಾಳಿಯಿಂದ ಗಂಭೀರ ಗಾಯಗೊಂಡಿರುವ ದಿನೇಶ್ ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂಟ್ವಾಳ ಡಿ.ವೈ.ಎಸ್.ಪಿ ವೆಲೆಂಟೈನ್ ಡಿ ಸೋಜ, ಸರ್ಕಲ್ ಇನ್ಸ್‌ಪೆಕ್ಟರ್ ಟಿ‌.ಡಿ. ನಾಗರಾಜ್, ಎಸ್. ಐ.ಪ್ರಸನ್ನ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Comments are closed.