ಉಡುಪಿ: ಎ.ಕೆ.ಎಂ.ಎಸ್ ಬಸ್ ಮಾಲೀಕನ ಕಛೇರಿಗೆ ನಾಲ್ಕು ಜನ ದುಷ್ಕರ್ಮಿಗಳು ತಲವಾರಿನೊಂದಿಗೆ ಬಂದು ಬೆದರಿಕೆ ಹಾಕಿ ತೆರಳಿದ ಘಟನೆ ಬುಧವಾರ ನಡೆದಿದೆ ಎನ್ನಲಾಗಿದೆ.
ಮಣಿಪಾಲದ ಲಕ್ಷ್ಮೀಂದ್ರ ನಗರದಲ್ಲಿರುವ ಎ.ಕೆ.ಎಮ್.ಎಸ್ ಬಸ್ ಕಚೇರಿಗೆ ಡಸ್ಟರ್ ಕಾರಿನಲ್ಲಿ ಬಂದ ದುಷ್ಕರ್ಮಿಗಳು ತಲವಾರು ಹಿಡಿದು ಬಂದಿದ್ದು ಈ ವೇಳೆ ಬಸ್ ಮಾಲಿಕ ಸೈಫುದ್ದೀನ್ ಇರಲಿಲ್ಲ.ಕಚೇರಿಯಲ್ಲಿದ್ದ ಸಿಬ್ಬಂದಿಗೆ ಬೆದರಿಸಿ ಈ ತಂಡದವರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಬಸ್ ಮಾಲೀಕ ಸೈಪುದ್ದೀನ್ ಕೆಲವು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಜಾಮೀನು ಪಡೆದು ಹೊರಗೆ ಬಂದಿದ್ದ.
ಮಣಿಪಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ತನಿಖೆ ನಡೆಸುತ್ತಿದ್ದಾರೆ.
Comments are closed.