ಮಂಗಳೂರು/ ಸುರತ್ಕಲ್, ನವೆಂಬರ್.18: ಹೂವಿನ ವ್ಯಾಪಾರಿಯೊಬ್ಬ ತನ್ನ ಪ್ರೇಯಸಿಯನ್ನು ಹತ್ಯೆಗೈದು ಬಳಿಕ ತಾನೂ ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮಂಗಳೂರಿನ ಹೊರವಲಯದ ಸುರತ್ಕಲ್ನಲ್ಲಿ ನಡೆದಿದೆ.
ಮಹಿಳೆಯನ್ನು ಹತ್ಯೆಗೈದು ಅತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಕುಳಾಯಿಯ ವಸಂತ್ (44) ಎಂದು ಗುರುತಿಸಲಾಗಿದೆ.
ಈತ ಏಳೆಂಟು ವರ್ಷಗಳಿಂದ ಹೂವು ವ್ಯಾಪಾರ ಮಾಡುತ್ತಿದ್ದು, ಈತನ ಅಂಗಡಿಗೆ ಹೂವು ಕೊಳ್ಳಲು ಬರುತ್ತಿದ್ದ ಸೂರಿಂಜೆಯ ವಿವಾಹಿತ ಮಹಿಳೆಯ ಪರಿಚಯವಾಗಿತ್ತು.
ಪರಿಚಯ ಪ್ರೇಮಕ್ಕೆ ತಿರುಗಿತ್ತು. ಬುಧವಾರ ಇವರಿಬ್ಬರ ನಡುವೆ ಯಾವುದೋ ಕಾರಣಕ್ಕೆ ಜಗಳವಾಗಿದೆ. ಈ ವೇಳೆ ವಸಂತ್ ತನ್ನ ಪ್ರಿಯತಮೆಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಎಸಿಪಿ ಬೆಳ್ಳಿಯಪ್ಪ ಹಾಗೂ ಸುರತ್ಕಲ್ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
Comments are closed.