ಕರಾವಳಿ

ಬಿಜೆಪಿ ರಾಷ್ಟ್ರೀಯ ನಾಯಕಿಯರಿಗೆ ‘ಉಡುಪಿ ಸೀರೆ’ ಉಡುಗೊರೆ ಕೊಟ್ಟ ಕರಂದ್ಲಾಜೆ..!

Pinterest LinkedIn Tumblr

ಬೆಂಗಳೂರು: ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ದೀಪಾವಳಿ ಉಡುಗೊರೆಯಾಗಿ ಕೇಂದ್ರ ಸಚಿವೆಯರಾದ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ ಹಾಗೂ ಇತರೆ ಉನ್ನತ ನಾಯಕರಿಗೆ ವಿಶೇಷ ವಸ್ತುವೊಂದನ್ನು ನೀಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ, ಮನೇಕಾ ಗಾಂಧಿ, ಶೆಫಾಲಿ ವೈದ್ಯ, ದೇಬಶ್ರೀ, ಮೀನಾಕ್ಷಿ ಲೆಖಿ, ವನತಿ, ಡಿಎಂಕೆ ಕನಿಮೋಳಿ ಸೇರಿದಂತೆ ಹಲವರಿಗೆ ‘ಉಡುಪಿ ಸೀರೆ’ಗಳನ್ನು ಶೋಭಾ ಅವರು ಉಡುಗೊರೆಯಾಗಿ ನೀಡಿದ್ದಾರೆ.

ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಳೀಯವಾಗಿ ಉಡುಪಿ ಸೀರೆಗಳನ್ನು ಖರೀದಿಸಿರುವ ಶೋಭಾ ಅವರು ಬಿಜೆಪಿ ನಾಯಕರಿಗೆ ಉಡುಗೊರೆಯಾಗಿ ಕೊಟ್ಟು ಶುಭಕೋರಿ ಉಡುಪಿ ಕೈಮಗ್ಗವನ್ನು ರಾಷ್ಟ್ರಮಟ್ಟದ ನಾಯಕರಿಗೂ ಮತ್ತೊಮ್ಮೆ ಪರಿಚಯಿಸುವ ಪ್ರಯತ್ನ ಮಾಡಿದ್ದಾರೆ. ಶೋಭಾ ಅವರು ನೀಡಿರುವ ಉಡುಗೊರೆ ಕುರಿತು ಟ್ವೀಟ್ ಮಾಡಿಸುವ ಶೆಫಾಲಿ ವೈದ್ಯ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾಜ್ಯ ಹಾಗೂ ಕೇಂದ್ರ ಬಿಜೆಪಿ ನಾಯಕರು ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Comments are closed.