ಕರಾವಳಿ

ಸ್ಮಾರ್ಟ್ ಸಿಟಿಯ ಕಾಮಗಾರಿಗಳಿಂದ ಜನಸಾಮಾನ್ಯರಿಗೆ ತೊಂದರೆ: ಶೀಘ್ರದಲ್ಲೇ ಕೆಲಸ ಪೂರ್ಣಕ್ಕೆ ಸೂಚನೆ

Pinterest LinkedIn Tumblr

ಮಂಗಳೂರು : ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿಯ ಕಾಮಗಾರಿಗಳ ಬಗ್ಗೆ ಆಕ್ಷೇಪ ಇದೆ, ಯಾವುದನ್ನು ನಡೆಸಬಹುದಿತ್ತು ಎಂದು ಸಲಹೆ ಇದೆ, ಅದೆಲ್ಲವನ್ನೂ ಸ್ಮಾರ್ಟ್ ಸಿಟಿಯ ನಿರ್ದೇಶಕರಲ್ಲಿ ಒಬ್ಬನಾಗಿ ತಿಳಿದುಕೊಂಡಿದ್ದು, ಈ ಬಗ್ಗೆ ಗಂಭೀರ ಚಿಂತನೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.

ಕೋವಿಡ್‌ನಿಂದಾಗಿ ಅನೇಕ ಕೆಲಸಗಳು ಬಾಕಿ ಉಳಿದಿದ್ದು, ಈಗ ಅವುಗಳನ್ನು ಕಾರ್ಯಗತಗೊಳಿಸಲಾಗುತ್ತಿದೆ, ಅದರಂತೆ ಹಂಪನಕಟ್ಟೆ ವೃತ್ತ, ರಸ್ತೆ ಕೆಲಸ ಶುರುವಾಗಿದೆ, ಜನರಿಗೆ ಇದರಿಂದಾಗಿ ತೊಂದರೆಯಾಗುತ್ತಿದೆ. ಆದರೆ ಆದಷ್ಟೂ ಶೀಘ್ರ ಕೆಲಸ ಪೂರ್ಣಗೊಳಿಸಲಾಗುವುದು. ಈ ಬಗ್ಗೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾ ತಿಳಿಸಿದರು.

Comments are closed.