ಕರಾವಳಿ

ರಸ್ತೆ ಅಪಘಾತ : ಕಲ್ಲಡ್ಕ ನಿವಾಸಿ ಸಂಘಪರಿವಾರದ ಕಾರ್ಯಕರ್ತ ಮೃತ್ಯು

Pinterest LinkedIn Tumblr

ಮಂಗಳೂರು /ಬಂಟ್ವಾಳ, ನವೆಂಬರ್.23 : ಕಲ್ಲಡ್ಕದಲ್ಲಿ ಆಮ್ನಿ ಕಾರು ಹಾಗು ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮಂಗಳೂರು ಖಾಸಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಕಲ್ಲಡ್ಕ ನಿವಾಸಿ, ಸಂಘಪರಿವಾರದ ಕಾರ್ಯಕರ್ತ ಯತಿರಾಜ್ (30) ಎಂದು ಹೆಸರಿಸಲಾಗಿದೆ.

ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ರವಿವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು, ಯತಿರಾಜ್ ಸಂಚರಿಸುತ್ತಿದ್ದ ಬೈಕ್ ಗೆ ಓಮ್ನಿ ಕಾರು ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತದ ರಭಸಕ್ಕೆ ಓಮ್ನಿ ಕಾರು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ನಿಂತಿದೆ. ಕಾರು ಚಾಲಕ ಕೆಲವು ಹೊತ್ತು ಹೊರಬರಲಾಗದೆ ಕಾರಿನೊಳಗೆ ಸಿಲುಕಿಕೊಂಡಿದ್ದ. ಕಾರು ಸಂಪೂರ್ಣ ಜಖಂಗೊಂಡಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯತಿರಾಜ್ ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಟ್ರಾಫಿಕ್ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

Comments are closed.