ಕರಾವಳಿ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ರಾಜ್ಯಾಧ್ಯಕ್ಷರಾಗಿ ಕೆ. ಜಯಪ್ರಕಾಶ್ ಹೆಗ್ಡೆ ನೇಮಕ

Pinterest LinkedIn Tumblr

ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಹಾಗೂ ಸಂಸದ ಹಾಲಿ ಬಿಜೆಪಿ ನಾಯಕ ಜಯಪ್ರಕಾಶ್ ಹೆಗ್ಡೆ ಅವರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ‌.

ಮೂರು ಬಾರಿ‌ ಶಾಸಕರಾಗಿ, ಮೀನುಗಾರಿಕಾ ಸಚಿವರಾಗಿ ಹಾಗೆಯೇ ಉಡುಪಿ ಚಿಕ್ಕಮಗಳೂರು ಸಂಸದರಾಗಿದ್ದ ಕೆ. ಜಯಪ್ರಕಾಶ್ ಹೆಗ್ಡೆ ಕಳೆದ ಕೆಲ ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧಿನಿಯಮ 1995ರ ಪರಿಚ್ಛೇದ 3 ಮತ್ತು 4(1) ಅಡಿಯಲ್ಲಿ ಪದತ್ತವಾದ ಅಧಿಕಾರದನ್ವಯ ಕರ್ನಾಟಕ‌ ಸರಕಾರ ಕೆ. ಜಯಪ್ರಕಾಶ್ ಹೆಗ್ಡೆ ಅವರಿಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ನೇಮಿಸಿದೆ‌ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ-1 ಅವರು ರಾಜ್ಯಪಾಲರ ಆದೇಶಾನುಸಾರ ಅಧಿಸೂಚನೆ ಪ್ರಕಟಿಸಿದ್ದಾರೆ.

(ವರದಿ-ಯೋಗೀಶ್ ಕುಂಭಾಸಿ)

Comments are closed.