ಕರಾವಳಿ

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘಕ್ಕೆ ಸತತ ಮೂರನೇ ಬಾರಿ ಪ್ರಶಸ್ತಿ

Pinterest LinkedIn Tumblr

ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಆರ್ಥಿಕ ಶಕ್ತಿಯಾಗಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘಕ್ಕೆ ಸತತ ಮೂರನೇ ಬಾರಿ ಎಸ್ ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ ಲಭಿಸಿದೆ.

ಸಾಧನೆಯ 89 ವರ್ಷಗಳಲ್ಲಿ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘವು ತನ್ನ ಆಸ್ತಿತ್ವ ವನ್ನು ಸಹಕಾರ ರಂಗದಲ್ಲಿ ಉಳಿಸಿಕೊಂಡು ಬಂದಿದೆ. ನೌಕರರ ಶ್ರೇಯೋಭಿವೃದ್ದಿಗೆ ಶ್ರಮಿಸುತ್ತಿರುವ ಈ ಸಂಘವು ಉತ್ತಮ ಸೇವೆಯನ್ನು ನೀಡುತ್ತಿದೆ.

ಪ್ರಸಕ್ತ 20 ವರ್ಷಗಳಿಂದ ಸಂಘವು ತನ್ನ ಸದಸ್ಯರ ಆರ್ಥಿಕ ಶಕ್ತಿಯಾಗಿ ಸದೃಢವಾಗಿ ಬೆಳೆದಿದೆ . ಸಂಘದ ಕಾರ್ಯ ಸಾಧನೆಯನ್ನು ಗುರುತಿಸಿ ಎಸ್ ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ 2017-18 ಮತ್ತು 2018-19ರ ಸಾಲಿನಲ್ಲಿ ಪ್ರಾಪ್ತಿಯಾಗಿತ್ತು . ಇದೀಗ ಮೂರನೇ ಬಾರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಸಹಕಾರಿ ನೌಕರರ ಸಂಘವು ಮುಡಿಗೇರಿಸಿಕೊಂಡಿದೆ

ಎಸ್ ಸಿಡಿಸಿಸಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಂಘಕ್ಕೆ ನೀಡಿದ ಎಸ್ ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ಸಂಘದ ಅಧ್ಯಕ್ಷರಾದ ಶ್ರೀ ಎಸ್. ಜಗದೀಶ್ಚಂದ್ರ ಅಂಚನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಸತೀಶ್ ಪೂಜಾರಿ ಸ್ವೀಕರಿಸಿಕೊಂಡರು .

ಈ ಸಂದರ್ಭದಲ್ಲಿ ಎಸ್ ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯಕುಮಾರ್ ಸೂರಿಂಜೆ , ನಿರ್ದೇಶಕರುಗಳಾದ ಶ್ರೀ ನಿರಂಜನ ಬಿ. ಶ್ರೀ ಟಿ.ಜಿ.ರಾಜರಾಮ ಭಟ್, ಶ್ರೀ ಭಾಸ್ಕರ್ ಎಸ್ ಕೋಟ್ಯಾನ್ , ಶ್ರೀ ವಾದಿರಾಜ ಶೆಟ್ಟಿ , ಶ್ರೀ ದೇವಿಪ್ರಸಾದ್ ಶೆಟ್ಟಿ ಬೆಳಪು , ಶ್ರೀ ಶಶಿಕುಮಾರ್ ರೈ ಬಾಲ್ಯೋಟ್ಟು , ಶ್ರೀ ಎಸ್. ಬಿ.ಜಯರಾಮ್ ರೈ , ಶ್ರೀ ರಾಜು ಪೂಜಾರಿ, ಶ್ರೀ ಅಶೋಕ್ ಕುಮಾರ್ ಶೆಟ್ಟಿ , ಶ್ರೀ ಮೋನಪ್ಪ ಶೆಟ್ಟಿ , ಶ್ರೀ ಹರಿಶ್ಚಂದ್ರ , ಶ್ರೀ ಕೆ. ಜೈರಾಜ್ ಬಿ.ರೈ , ಶ್ರೀ ಸದಾಶಿವ ಉಳ್ಳಾಲ್ , ಶ್ರೀ ರಾಜೇಶ್ ರಾವ್ , ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರವೀಂದ್ರ ಬಿ. ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಪ್ರವೀಣ್ ಬಿ.ನಾಯಕ್ ಉಭಯ ಜಿಲ್ಲೆಗಳ ಸಹಕಾರಿ ಯೂನಿಯನ್ ಅಧ್ಯಕ್ಷರುಗಳಾದ ಶ್ರೀ ಇಂದ್ರಾಳಿ ಜಯಕರ ಶೆಟ್ಟಿ , ಶ್ರೀ ಕೌಶಲ್ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು .

Comments are closed.