ಕರ್ನಾಟಕ

ಮಾಜಿ ಕಾಂಗ್ರೆಸ್ ನಾಯಕಿ, ಬಾಲಿವುಡ್‌ ನಟಿ ಊರ್ಮಿಳಾ ಶಿವಸೇನೆ ಸೇರ್ಪಡೆ ಖಚಿತ!

Pinterest LinkedIn Tumblr

ಮುಂಬೈ : ಬಾಲಿವುಡ್‌ ನಟಿ ಮತ್ತು ಹೋರಾಟಗಾರ್ತಿ ಊರ್ಮಿಳಾ ಮಾತೋಂಡ್ಕರ್‌ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ಮಂಗಳವಾರ ಶಿವಸೇನೆ ಸೇರ್ಪಡೆಯಾಗಲಿದ್ದಾರೆ.

ಮಾಜಿ ಕಾಂಗ್ರೆಸ್ ನಾಯಕಿ ಊರ್ಮಿಳಾ ಮಾತೋಂಡ್ಕರ್ ಮಂಗಳವಾರ ಶಿವಸೇನಾ ಪಕ್ಷಕ್ಕೆ ಉದ್ಧವ್ ಠಾಕ್ರೆ ಸಮ್ಮುಖದಲ್ಲಿ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಪ್ತ ಹರ್ಷಲ್ ಪ್ರಧಾನ್ ತಿಳಿಸಿದ್ದಾರೆ.

2019ರಲ್ಲಿ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್‌ನಿಂದ ಉತ್ತರ ಮುಂಬೈ ಕ್ಷೇತ್ರದಿಂದ ಊರ್ಮಿಳಾ ಅವರು ಸ್ಪರ್ಧಿಸಿದ್ದರು. ಆದರೆ ಗೆಲುವು ಸಾಧಿಸುವಲ್ಲಿ ವಿಫಲರಾಗಿದ್ದರು. ಕಾಂಗ್ರೆಸ್‌ನ ಮುಂಬೈ ಘಟಕದೊಂದಿಗಿನ ಭಿನ್ನಾಭಿಪ್ರಾಯಗಳಿಂದಾಗಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಿಂತ ಮೊದಲೇ ಪಕ್ಷ ತೊರೆದಿದ್ದರು.

ಬಾಲಿವುಡ್‌ ನಟಿ ಕಂಗನಾ ರನೌತ್‌ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿ ನೀಡಿದ ಹೇಳಿಕೆಯನ್ನು ಖಂಡಿಸಿದ್ದ ಊರ್ಮಿಳಾ ಅವರಿಗೆ ಈಗಾಗಲೇ ಶಾಸಕ ಸ್ಥಾನ ನೀಡಲು ಶಿವಸೇನೆ ಮುಂದಾಗಿದೆ ಎನ್ನಲಾಗಿದೆ.

Comments are closed.