ಕುಂದಾಪುರ: ಬಾವಿಯೊಂದಕ್ಕೆ ಬಿದ್ದ ಜಿಂಕೆಯನ್ನು ಅರಣ್ಯಾಧಿಕಾರಿಗಳು ಗ್ರಾಮಸ್ಥರ ಸಹಕಾರದಿಂದ ಮೇಲಕ್ಕೆತ್ತಿ ರಕ್ಷಿಸಿದ ಘಟನೆ ಕುಂದಾಪುರ ತಾಲೂಕು ಕಂದಾವರ ಗ್ರಾಮದ ಹೇರಿಕೆರೆ ಎಂಬಲ್ಲಿ ಶುಕ್ರವಾರ ನಡೆದಿದೆ.
ಇಲ್ಲಿನ ರಾಜೇಂದ್ರ ಎನ್ನುವರ ಮನೆ ಸಮೀಪದ ಬಾವಿಗೆ ಜಿಂಕೆ ಬಿದ್ದಿದ್ದು ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಅದರಂತೆ ಸ್ಥಳಕ್ಕಾಮಿಸಿದ ಅರಣ್ಯ ಇಲಾಖೆಯವರು ಜಿಂಕೆಯನ್ನು ನಾಜೂಕಾಗಿ ಮೇಲಕ್ಕೆತ್ತಿದ್ದಾರೆ.
ಉಪವಲಯ ಅರಣ್ಯಾಧಿಕಾರಿ ಉದಯ್, ಚಾಲಕ ಅಶೋಕ್, ಅರಣ್ಯ ವೀಕ್ಷಕ ಸೋಮಶೇಖರ್ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿದ್ದು ಸ್ಥಳೀಯರು ಇವರಿಗೆ ಸಹಕಾರ ನೀಡಿದರು.
Comments are closed.